Webdunia - Bharat's app for daily news and videos

Install App

ನಾನ್ ವೆಜ್ ಕೊಟ್ಟರೂ ಪವಿತ್ರಾ ಗೌಡಗೆ ನಿದ್ರೆ ಬರ್ತಿಲ್ಲ, ಊಟ ಸೇರ್ತಿಲ್ಲ

Krishnaveni K
ಶನಿವಾರ, 22 ಜೂನ್ 2024 (11:56 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ ಈಗ ಜೈಲಿನ ವಾತಾವರಣದಲ್ಲಿ ಊಟ ಬರುತ್ತಿಲ್ಲ, ನಿದ್ರೆಯಿಲ್ಲ ಎನ್ನುವ ಪರಿಸ್ಥಿತಿಯಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಎರಡು ದಿನಗಳಿಂದ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಡಿ ಬ್ಲಾಕ್ ನ ಬ್ಯಾರಕ್ ನಲ್ಲಿ ಅವರನ್ನು ಇರಿಸಲಾಗಿದೆ. ಯಾವುದೇ ವಿಶೇಷ ಟ್ರೀಟ್ ಮೆಂಟ್ ಕೊಡಲಾಗಿಲ್ಲ.

ಪವಿತ್ರಾ ಜೊತೆಗೆ ಇತರೆ 8 ಕೈದಿಗಳಿದ್ದಾರೆ. ಅವರ ಜೊತೆಗೆ ಸಾಮಾನ್ಯರಂತೇ ಇವರನ್ನೂ ಇರಿಸಲಾಗಿದೆ. ಮೊದಲ ದಿನ ಸಾಮಾನ್ಯ ಊಟ ಮಾಡಿದ್ದ ಪವಿತ್ರಾ ನಿದ್ರೆಯಿಲ್ಲದೇ ಕಳೆದಿದ್ದರು. ಎರಡನೇ ದಿನ ಅವರಿಗೆ ಇಷ್ಟದ ಮಾಂಸದೂಟವನ್ನೇ ನೀಡಲಾಗಿದೆ. ಹಾಗಿದ್ದರೂ ಯಾಕೋ ನೆಮ್ಮದಿಯಿಲ್ಲದೇ ನಿದ್ರೆ ಮಾಡದೇ ಕಾಲ ಕಳೆದಿದ್ದಾರಂತೆ.

ಕಾನೂನು ಕೈಗೆ ತೆಗೆದುಕೊಳ್ಳಲು ಹೋಗಿ ಈಗ ಪಶ್ಚಾತ್ತಾಪ ಪಡುವಂತಾಗಿದೆ. ಇದುವರೆಗೆ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾಗೆ ಈಗ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ. ಇಂದು ದರ್ಶನ್ ಸೇರಿದಂತೆ ಉಳಿದ ಆರೋಪಿಗಳೂ ಕೋರ್ಟ್ ಗೆ ಹಾಜರಾಗಲಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments