ರೇಣುಕಾಸ್ವಾಮಿ ಕುಟುಂಬದ ಜೊತೆ ಕಾಂಪ್ರಮೈಸ್ ಗೆ ದರ್ಶನ್ ರೆಡಿ: ಕ್ಷಮೆ ನೀಡುವ ಬಗ್ಗೆ ರೇಣುಕಾಸ್ವಾಮಿ ತಂದೆ ಹೇಳಿದ್ದೇನು

Krishnaveni K
ಗುರುವಾರ, 25 ಜುಲೈ 2024 (15:08 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೇಗಾದರೂ ಪಾರಾಗಲೇ ಬೇಕು ಎಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ನಟ ದರ್ಶನ್ ಈಗ ಯಾವ ಕಾಂಪ್ರಮೈಸ್ ಗೂ ಸಿದ್ಧ. ಆದರೆ ದರ್ಶನ್ ಗೆ ಕ್ಷಮೆ ನೀಡಲು ರೇಣುಕಾಸ್ವಾಮಿ ಕುಟುಂಬ ತಯಾರಿದೆಯಾ? ಈ ಬಗ್ಗೆ ರೇಣುಕಾಸ್ವಾಮಿ ಹೇಳಿದ್ದೇನು ಇಲ್ಲಿದೆ ವಿವರ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಿಂದ ದರ್ಶನ್ ಹೊರಬರಲು ಇರುವ ಏಕೈಕ ಮಾರ್ಗವೆಂದರೆ ರೇಣುಕಾಸ್ವಾಮಿ ಕುಟುಂಬದ ಜೊತೆ ಕಾಂಪ್ರಮೈಸ್ ಆಗುವುದು. ರೇಣುಕಾಸ್ವಾಮಿ ಕುಟುಂಬ ದರ್ಶನ್ ಜೊತೆ ಕಾಂಪ್ರಮೈಸ್ ಮಾಡಿಕೊಂಡರೆ ಕೇಸ್ ಕೊಂಚ ಸಡಿಲವಾಗಬಹುದು ಎಂಬ ವಿಶ್ವಾಸವಿದೆ.

ಆದರೆ ಇದಕ್ಕೆ ರೇಣುಕಾಸ್ವಾಮಿ ಕುಟುಂಬಸ್ಥರು ತಯಾರಿದ್ದಾರಾ ಎನ್ನುವುದು ಪ್ರಶ್ನೆ. ಈ ಬಗ್ಗೆ ಮಾಧ್ಯಮಗಳಿಗೆ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಪ್ರಮೈಸ್ ಗೆ ನಾವು ಒಪ್ಪಲ್ಲ ಎಂದಿದ್ದಾರೆ. ನನ್ನ ಮಗನಿಗೆ ನ್ಯಾಯ ದೊರಕಿಸಿಕೊಡಬೇಕು ಅಷ್ಟೇ ನಮಗಿರುವ ಗುರಿ ಎಂದಿದ್ದಾರೆ.

ದರ್ಶನ್ ಇರಲಿ ಯಾರೇ ಇರಲಿ, ನಮ್ಮ ಮಗ ಕೊನೆಗಳಿಗೆಯಲ್ಲಿ ಏನು ನೋವು ಅನುಭವಿಸಿದ್ದಾನೆ ಎಂದು ನಮಗೆ ಗೊತ್ತು. ಹೀಗಾಗಿ ಅವನ ಸಾವಿಗೆ ನ್ಯಾಯ ಒದಗಿಸಿಕೊಡುವುದೇ ನಮ್ಮ ಮುಂದಿರುವುದು. ಅದು ಬಿಟ್ಟು ಯಾವುದೇ ಕಾಂಪ್ರಮೈಸ್ ಗೆ ನಾವು ಸಿದ್ಧ ಇಲ್ಲ. ಇದುವರೆಗೂ ಸರ್ಕಾರ, ಪೊಲೀಸರು, ಕೋರ್ಟ್ ವಿಚಾರಣೆ ನಮಗೆ ತೃಪ್ತಿ ತಂದಿದೆ. ಕಾನೂನು ಪ್ರಕಾರ ಏನು ನಡೆಯಬೇಕೋ ಅದು ನಡೆಯಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments