Webdunia - Bharat's app for daily news and videos

Install App

ರೇಣುಕಾಸ್ವಾಮಿ ಮರ್ಡರ್ ಕೇಸ್ ನ ಎಲ್ಲಾ ಆರೋಪಿಗಳೂ ಈಗ ಫ್ರೀ ಬರ್ಡ್ಸ್

Krishnaveni K
ಮಂಗಳವಾರ, 24 ಡಿಸೆಂಬರ್ 2024 (09:52 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳೂ ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳಿಗೂ ಜಾಮೀನು ಸಿಕ್ಕಿದೆ.

ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಒಂದು ವಾರದ ಹಿಂದೆ ಹೈಕೋರ್ಟ್ ರೆಗ್ಯುಲರ್ ಜಾಮೀನು ನೀಡಿತ್ತು. ದರ್ಶನ್ ಮೊದಲೇ ಮಧ್ಯಂತರ ಜಾಮೀನಿನಲ್ಲಿ ಹೊರಬಂದಿದ್ದರು. ಪವಿತ್ರಾ ಗೌಡ ಆರು  ತಿಂಗಳ ಬಳಿಕ ಕಳೆದ ವಾರ ಬಿಡುಗಡೆಯಾಗಿದ್ದಳು. ಅದಾದ ಬಳಿಕ ದರ್ಶನ್ ಆಪ್ತರಾದ ನಾಗರಾಜ್, ಲಕ್ಷ್ಮಣ್, ಜಗದೀಶ್ ಕೂಡಾ ಬಿಡುಗಡೆಯಾಗಿದ್ದರು.

ಇದೀಗ ಮತ್ತೆ 5 ಮಂದಿಗೆ ಜಾಮೀನು ಮಂಜೂರಾಗಿದೆ. ಉಳಿದ ಐವರು ಆರೋಪಿಗಳಿಗೂ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿನಯ್, ಪವನ್, ರಾಘವೇಂದ್ರ, ನಂದೀಶ್, ಧನರಾಜ್ ಗೂ ಈಗ ಜಾಮೀನು ಸಿಕ್ಕಿದೆ.

ಅದರೊಂದಿಗೆ ಈಗ ಎಲ್ಲಾ ಆರೋಪಿಗಳೂ ಜಾಮೀನಿನ ಮೇಲೆ ಹೊರಬಂದಂತಾಗಿದೆ. ಇದೀಗ ಎಲ್ಲರೂ ವಿಚಾರಣೆ ಸಂದರ್ಭದಲ್ಲಿ ಮಾತ್ರ ಕೋರ್ಟ್ ಗೆ ಹಾಜರಾಗಬೇಕಾಗುತ್ತದೆ. ಅದಾದ ಬಳಿಕ ಆರೋಪ ಸಾಬೀತಾದರೆ ಮಾತ್ರ ಮತ್ತೆ ಜೈಲು ಕಾಣಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments