Webdunia - Bharat's app for daily news and videos

Install App

ರೇಣುಕಾಸ್ವಾಮಿ ಮರ್ಡರ್ ಕೇಸ್ ನ ಎಲ್ಲಾ ಆರೋಪಿಗಳೂ ಈಗ ಫ್ರೀ ಬರ್ಡ್ಸ್

Krishnaveni K
ಮಂಗಳವಾರ, 24 ಡಿಸೆಂಬರ್ 2024 (09:52 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳೂ ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳಿಗೂ ಜಾಮೀನು ಸಿಕ್ಕಿದೆ.

ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಒಂದು ವಾರದ ಹಿಂದೆ ಹೈಕೋರ್ಟ್ ರೆಗ್ಯುಲರ್ ಜಾಮೀನು ನೀಡಿತ್ತು. ದರ್ಶನ್ ಮೊದಲೇ ಮಧ್ಯಂತರ ಜಾಮೀನಿನಲ್ಲಿ ಹೊರಬಂದಿದ್ದರು. ಪವಿತ್ರಾ ಗೌಡ ಆರು  ತಿಂಗಳ ಬಳಿಕ ಕಳೆದ ವಾರ ಬಿಡುಗಡೆಯಾಗಿದ್ದಳು. ಅದಾದ ಬಳಿಕ ದರ್ಶನ್ ಆಪ್ತರಾದ ನಾಗರಾಜ್, ಲಕ್ಷ್ಮಣ್, ಜಗದೀಶ್ ಕೂಡಾ ಬಿಡುಗಡೆಯಾಗಿದ್ದರು.

ಇದೀಗ ಮತ್ತೆ 5 ಮಂದಿಗೆ ಜಾಮೀನು ಮಂಜೂರಾಗಿದೆ. ಉಳಿದ ಐವರು ಆರೋಪಿಗಳಿಗೂ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿನಯ್, ಪವನ್, ರಾಘವೇಂದ್ರ, ನಂದೀಶ್, ಧನರಾಜ್ ಗೂ ಈಗ ಜಾಮೀನು ಸಿಕ್ಕಿದೆ.

ಅದರೊಂದಿಗೆ ಈಗ ಎಲ್ಲಾ ಆರೋಪಿಗಳೂ ಜಾಮೀನಿನ ಮೇಲೆ ಹೊರಬಂದಂತಾಗಿದೆ. ಇದೀಗ ಎಲ್ಲರೂ ವಿಚಾರಣೆ ಸಂದರ್ಭದಲ್ಲಿ ಮಾತ್ರ ಕೋರ್ಟ್ ಗೆ ಹಾಜರಾಗಬೇಕಾಗುತ್ತದೆ. ಅದಾದ ಬಳಿಕ ಆರೋಪ ಸಾಬೀತಾದರೆ ಮಾತ್ರ ಮತ್ತೆ ಜೈಲು ಕಾಣಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments