Webdunia - Bharat's app for daily news and videos

Install App

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 7ಆರೋಪಿಗಳ ಜಾಮೀನು ಭವಿಷ್ಯ ನಾಳೆ ನಿರ್ಧಾರ, ದರ್ಶನ್‌ ಪಾಲಿಗೆ ಬಿಗ್‌ ಡೇ

Sampriya
ಗುರುವಾರ, 12 ಡಿಸೆಂಬರ್ 2024 (19:52 IST)
Photo Courtesy X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ.

ಜಾಮೀನು  ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ದೀರ್ಘ ಸಮಯದಿಂದ ನಡೆಯುತ್ತಿದ್ದು, ನಾಳೆ ಪ್ರಕರಣದ ವಿಚಾರಣೆ  ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು ನಡೆಸಿ ನಾಳೆ ಮಧ್ಯಾಹ್ನ 2:30ಕ್ಕೆ ಆದೇಶ ಹೊರಡಿಸಲಿದೆ. ಈ ಮೂಲಕ ಚಿಕಿತ್ಸೆ ಸಂಬಂಧ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಭವಿಷ್ಯದ ಪ್ರಮುಖ ದಿನವಾಗಿದೆ.

ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಆದೇಶ ನಾಳೆಗೆ ಹೊರಬೀಳಲಿದೆ.

ಬೆನ್ನುನೋವಿನ ಕಾರಣ ಮಧ್ಯಂತರ ಜಾಮೀನಿನ ಮೇಲೆ ದರ್ಶನ್ ಜೈಲಿಂದ ಹೊರಗಿದ್ದಾರೆ. ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಇದುವರೆಗೂ ಆಪರೇಷನ್ ಆಗಿಲ್ಲ ಎಂದು ಹೇಳಲಾಗುತ್ತಿದೆ.  ಒಟ್ಟಾರೆ ನಾಳೆ ಜಾಮೀನು ತೀರ್ಪು ಹೊರಬರಲಿದ್ದು, ನಾಳೆ ದರ್ಶನ್​ ಪಾಲಿಗೆ ಶುಭ ಶುಕ್ರವಾರವಾಗುತ್ತಾ ಅಥವಾ ಬ್ಲ್ಯಾಕ್ ಫ್ರೈಡೇ ಆಗುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments