Webdunia - Bharat's app for daily news and videos

Install App

ರೇಣುಕಾಸ್ವಾಮಿ ಮರ್ಡರ್ ಕೇಸ್ ಚಾರ್ಜ್ ಶೀಟ್ ಸಲ್ಲಿಕೆ: 3,991 ಪುಟಗಳಲ್ಲಿ ದರ್ಶನ್ ವಿರುದ್ಧ ಆರೋಪಗಳೇನು

Krishnaveni K
ಬುಧವಾರ, 4 ಸೆಪ್ಟಂಬರ್ 2024 (11:07 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಸಂಬಂಧಪಟ್ಟಂತೆ ಕೊನೆಗೂ ಪೊಲೀಸರು ನ್ಯಾಯಾಲಯಕ್ಕೆ ಇಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 3991 ಪುಟಗಳ ಚಾರ್ಜ್ ಶೀಟ್ ನಲ್ಲಿ ಸಾಕಷ್ಟು ಕುತೂಹಲಕಾರೀ ಅಂಶಗಳಿವೆ.

ಆರಂಭದಲ್ಲೇ ನಟ ದರ್ಶನ್ ಎ2 ಆರೋಪಿ ಮತ್ತು ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರು. ಇದೀಗ ಚಾರ್ಜ್ ಶೀಟ್ ಸಲ್ಲಿಕೆ ವೇಳೆ ದರ್ಶನ್ ಎ1 ಆಗಬಹುದು ಎಂದು ಊಹಿಸಲಾಗಿತ್ತು. ಆದರೆ ಅವರು ಎ2 ಆಗಿಯೇ ಮುಂದುವರಿದಿದ್ದಾರೆ. ಇದು ದರ್ಶನ್ ಗೆ ಕೊಂಚ ರಿಲೀಫ್ ನೀಡಲಿದೆ.

ಪವಿತ್ರಾ ಎ1 ಆರೋಪಿ, ದರ್ಶನ್ ಎ2 ಆರೋಪಿಯಾಗಿ ಮುಂದುವರಿದಿದ್ದಾರೆ. ಪೊಲೀಸ್ ತನಿಖೆಯಲ್ಲಿ ಹೊರಬಿದ್ದಿರುವ ಸತ್ಯಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದ್ದು, ಸಾಕಷ್ಟು ಕುತೂಹಲಕಾರೀ ಅಂಶಗಳು ಬಯಲಾಗಿದೆ. ಎಸಿಪಿ ಚಂದನ್ ಮತ್ತು ಪೊಲೀಸರ ತಂಡ ನಡೆಸಿದ ತನಿಖೆಯಲ್ಲಿ ಸಂಗ್ರಹಿಸಲಾದ ಎಲ್ಲಾ ಸಾಕ್ಷ್ಯಗಳನ್ನೂ ಇಲ್ಲಿ ಉಲ್ಲೇಖ ಮಾಡಲಾಗಿದ್ದು, ದರ್ಶನ್ ಆಂಡ್ ಗ್ಯಾಂಗ್ ರನ್ನು ಲಾಕ್ ಮಾಡಲಾಗಿದೆ.

ಸುಮಾರು 231 ಸಾಕ್ಷ್ಯಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಸಿಸಿಟಿವಿ ಫೂಟೇಜ್, ಪ್ರತ್ಯಕ್ಷ ಸಾಕ್ಷ್ಯಗಳು, ಕಡತಗಳ ಸಾಕ್ಷ್ಯ ಒದಗಿಸಲಾಗಿದೆ. ಸಾಕ್ಷಿಗಳ ಪೈಕಿ ಮೂವರು ಪ್ರತ್ಯಕ್ಷ ಸಾಕ್ಷಿಗಳಾಗಿದ್ದಾರೆ. ದರ್ಶನ್ ವಿರುದ್ಧ ಸಿಸಿಟಿವಿ ಫೂಟೇಜ್, ಆರೋಪಿಗಳ ಹೇಳಿಕೆ, ಎಫ್ಎಸ್ಎಲ್ ವರದಿಗಳು ಪ್ರಬಲ ಸಾಕ್ಷ್ಯಗಳಾಗಿವೆ.  ರೇಣುಕಾಸ್ವಾಮಿ ಕೊಲೆಗೆ ಮೂಲ ಕಾರಣ ಪವಿತ್ರಾ ಗೌಡ. ಹೀಗಾಗಿ ಅವರು ಎ1 ಆಗಿದ್ದಾರೆ. ಪವಿತ್ರಾ ಚಪ್ಪಲಿಯಿಂದ ಹೊಡೆದಿರುವುದು, ಕೃತ್ಯ ನಡೆದ ವೇಳೆ ಪವಿತ್ರಾ ಸ್ಥಳದಲ್ಲಿದ್ದಿದ್ದಕ್ಕೆ ಸಿಸಿಟಿವಿ ದೃಶ್ಯಗಳು, ಮೊಬೈಲ್ ಸಿಗ್ನಲ್ ಸಾಕ್ಷ್ಯಗಳಿವೆ. 59 ಜನರನ್ನು ಪಂಚನಾಮೆಗೆ ಬಳಸಲಾಗಿದೆ. ತಹಶೀಲ್ದಾರ್, ಆರ್ ಟಿಒ ಅಧಿಕಾರಿಗಳು, ಇಂಜಿನಿಯರ್ ಗಳು ಸಾಕ್ಷಿಗಳಾಗಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಗಳೂ ಮಿಸ್ ಆಗದಂತೆ ಪೊಲೀಸರು ಎಚ್ಚರಿಕೆ ವಹಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments