Webdunia - Bharat's app for daily news and videos

Install App

ರೇಣುಕಾಸ್ವಾಮಿ ಮರ್ಡರ್ ಕೇಸ್: ದರ್ಶನ್ ಗೆ ಇಂದು ಮಹತ್ವದ ದಿನ

Krishnaveni K
ಮಂಗಳವಾರ, 26 ನವೆಂಬರ್ 2024 (11:34 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಇಂದು ನಟ ದರ್ಶನ್ ಗೆ ಇಂದು ಮಹತ್ವದ ದಿನವಾಗಿದೆ. ದರ್ಶನ್ ಜಾಮೀನು ಅರ್ಜಿ ಮತ್ತೊಮ್ಮೆ ವಿಚಾರಣೆಗೆ ಬರಲಿದೆ.

ಬೆನ್ನು ನೋವಿನ ಕಾರಣದಿಂದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗಿ 15 ದಿನಗಳೇ ಕಳೆದಿವೆ. ಇನ್ನೂ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿಲ್ಲ. ಹೀಗಾಗಿ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಬೇಕು ಎಂಬುದು ನೆಪ ಮಾತ್ರ ಎಂಬ ಸಂಶಯ ಹುಟ್ಟಿದೆ.

ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಇದ್ದರೆ ಪಾರ್ಶ್ವವಾಯುವಿಗೆ ತುತ್ತಾಗಬಹುದು ಎಂದೆಲ್ಲಾ ಹೈಕೋರ್ಟ್ ನಲ್ಲಿ ದರ್ಶನ್ ಪರ ವಕೀಲರು ಹೇಳಿದ್ದರು. ಆದರೆ ಆಸ್ಪತ್ರೆಗೆ ದಾಖಲಾಗಿ ಇಷ್ಟು ದಿನ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗದೇ ದಿನ ತಳ್ಳುತ್ತಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ಜಾಮೀನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಪೊಲೀಸರೂ ಸಿದ್ಧತೆ ನಡೆಸಿದ್ದಾರೆ.

ಈ ನಡುವೆ ಅವರು ಮಾಮೂಲು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆ ಇಂದು ಮತ್ತೊಮ್ಮೆ ನಡೆಯಲಿದೆ. ಈ ವೇಳೆ ಅವರ ಬೆನ್ನು ನೋವಿನ ಶಸ್ತ್ರಚಿಕಿತ್ಸೆ ವಿಚಾರ ಚರ್ಚೆಗೆ ಬರುವ ಸಾಧ್ಯತೆಯಿದೆ. ಈ ವಿಚಾರ ಅವರ ಶಸ್ತ್ರಚಿಕಿತ್ಸೆ ವಿಚಾರ ಚರ್ಚೆಗೆ ಬರಲಿದೆ. ಇದಕ್ಕೆ ಇಂದು ದರ್ಶನ್ ಪರ ವಕೀಲರು ಸೂಕ್ತ ಕಾರಣಗಳನ್ನು ನೀಡುವ ಅನಿವಾರ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments