Webdunia - Bharat's app for daily news and videos

Install App

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Krishnaveni K
ಬುಧವಾರ, 11 ಜೂನ್ 2025 (10:18 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಮತ್ತು ಸ್ನೇಹಿತೆ ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ. ಇಂದಿಗೆ ಒಂದು ವರ್ಷಗಳ ಹಿಂದೆ ದರ್ಶನ್ ರನ್ನು ಬಂಧಿಸಲಾಗಿತ್ತು.

ಪವಿತ್ರಾ ಗೌಡಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ರೇಣುಕಾಸ್ವಾಮಿಯನ್ನು ದರ್ಶನ್ ಚಿತ್ರದುರ್ಗದಿಂದ ತಮ್ಮ ಸಂಗಡಿಗರ ಸಹಾಯದಿಂದ ಬೆಂಗಳೂರಿನ ಪಟ್ಟಣಗೆರೆ ಶೆಡ್ ಗೆ ಕರೆಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು. ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎನ್ನುವುದು ಪ್ರಕರಣವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇದೇ ದಿನ ದರ್ಶನ್ ರನ್ನು ಮೈಸೂರಿನ ಹೋಟೆಲ್ ನಿಂದ ಬಂಧಿಸಲಾಗಿತ್ತು. ಡೆವಿಲ್ ಶೂಟಿಂಗ್ ಗೆಂದು ಹೋಟೆಲ್ ನಲ್ಲಿ ಜಿಮ್ ಮಾಡಿ ದರ್ಶನ್ ಹೋಟೆಲ್ ರೂಂನಲ್ಲಿ ಸ್ನಾನಕ್ಕೆ ಹೋಗಿದ್ದಾಗ ಎಸಿಪಿ ಚಂದನ್ ನೇತೃತ್ವದ ಟೀಂ ದರ್ಶನ್ ರನ್ನು ಹೊರಗೆ ಕರೆದು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತಂದಿತ್ತು.

ಇದಾದ ಬಳಿಕ ಬೆಂಗಳೂರಿನಲ್ಲಿಯೇ ಇದ್ದ ಪವಿತ್ರಾ ಗೌಡರನ್ನೂ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪೊಲೀಸರು ಕರೆಸಿಕೊಂಡರು. ಬಳಿಕ ಅವರನ್ನೂ ವಶಕ್ಕೆ ಪಡೆದುಕೊಂಡರು. ಈ ಘಟನೆ ನಡೆದು ಈಗ ಒಂದು ವರ್ಷವಾಗಿದೆ. ದರ್ಶನ್ ಮತ್ತು ಇತರೆ ಎಲ್ಲಾ ಆರೋಪಿಗಳು ಈಗ ಜಾಮೀನಿನ ಮೇಲೆ ಹೊರಗಡೆಯಿದ್ದಾರೆ. ಇತ್ತ ರೇಣುಕಾಸ್ವಾಮಿ ಕುಟುಂಬದಲ್ಲಿ ದುಃಖ ಮಾಸಿಲ್ಲ. ಆದರೆ ಅಂದು ಗರ್ಭಿಣಿಯಾಗಿದ್ದ ರೇಣುಕಾಸ್ವಾಮಿ ಪತ್ನಿ ಈಗ ಗಂಡುಮಗುವಿನ ತಾಯಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments