Select Your Language

Notifications

webdunia
webdunia
webdunia
Wednesday, 9 April 2025
webdunia

ನಟ ದರ್ಶನ್ ಜಾಮೀನಿಗೆ ಕಂಟಕ ತರುತ್ತಾರಾ ಪೊಲೀಸರು: ರೇಣುಕಾಸ್ವಾಮಿ ತಂದೆಯ ಆಗ್ರಹವೇನು

Darshan

Krishnaveni K

ಬೆಂಗಳೂರು , ಶನಿವಾರ, 14 ಡಿಸೆಂಬರ್ 2024 (11:06 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ನಿನ್ನೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆದರೆ ಅವರ ವಿರುದ್ಧ ಪೊಲೀಸರು ಸುಪ್ರೀಂಕೋರ್ಟ್ ಗೆ ಹೋಗಲಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ನಟ ದರ್ಶನ್ ಗೆ ಈಗಾಗಲೇ ಬೆನ್ನು ನೋವಿನ ನೆಪದಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದರ ಅವಧಿಯನ್ನು ಇತ್ತೀಚೆಗಷ್ಟೇ ವಿಸ್ತರಿಸಿತ್ತು. ಆದರೆ ಈಗ ಹೈಕೋರ್ಟ್ ಮಾಮೂಲಿ ಜಾಮೀನು ಮಂಜೂರು ಮಾಡಿರುವುದರಿಂದ ದರ್ಶನ್ ಆಂಡ್ ಗ್ಯಾಂಗ್ ನಿರಾಳವಾಗಿದ್ದಾರೆ.

ಆದರೆ ದರ್ಶನ್ ಗೆ ಈ ಹಿಂದೆ ಮಧ್ಯಂತರ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಯಾಗಬೇಕೆಂದು ಜಾಮೀನು ಪಡೆದಿದ್ದ ದರ್ಶನ್ ಇದುವರೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ ಎನ್ನುವುದು ಪೊಲೀಸರ ವಾದವಾಗಿತ್ತು.

ಆದರೆ ಈಗ ಮಾಮೂಲಿ ಜಾಮೀನು ಮಂಜೂರು ಮಾಡಿರುವುದರ ವಿರುದ್ಧವೂ ಪೊಲೀಸರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆಯಾ ಎಂದು ಪ್ರಶ್ನೆ ಮೂಡಿದೆ. ದರ್ಶನ್ ಗೆ ಜಾಮೀನು ಮಂಜೂರು ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ನಮ್ಮ ಮಗನಿಗೆ ನ್ಯಾಯ ಸಿಗಬೇಕು ಎಂಬುದೇ ನಮ್ಮ ಉದ್ದೇಶ. ದರ್ಶನ್ ಇರಲಿ, ಯಾರೇ ಇರಲಿ ನಮ್ಮ ಮನೆಗೆ ಬರುವುದು ನಮಗೆ ಬೇಕಿಲ್ಲ. ನಮಗೆ ಕೋರ್ಟ್, ಸರ್ಕಾರದ ಮೇಲೆ ನಂಬಿಕೆಯಿದೆ. ಈ ಮೊದಲು ಮಧ್ಯಂತರ ಜಾಮೀನು ಮಂಜೂರಾದಾಗಲೂ ಸರ್ಕಾರ ತಕ್ಷಣವೇ ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿತ್ತು. ಈಗಲೂ ಸಲ್ಲಿಸುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತ್ರಿಶಾ ಜೊತೆ ಪ್ರೈವೇಟ್ ಜೆಟ್ ನಲ್ಲಿ ದಳಪತಿ ವಿಜಯ್: ಪತ್ನಿ ಸಂಗೀತಾಗೆ ನ್ಯಾಯ ಕೊಡಿ ಎಂದ ಫ್ಯಾನ್ಸ್