ದರ್ಶನ್ ನಂಬಿ ಹೋಗಿ ಕೈಗೆ ಚೊಂಬು: ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕರೂ ಬಿಡುಗಡೆ ಇಲ್ಲ

Krishnaveni K
ಶುಕ್ರವಾರ, 27 ಸೆಪ್ಟಂಬರ್ 2024 (09:42 IST)
ಬೆಂಗಳೂರು: ರೇಣಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ರನ್ನು ನಂಬಿ ಹೋದ ಕೆಲವು ಆರೋಪಿಗಳಿಗೆ ಚೊಂಬೇ ಗತಿಯಾಗಿದೆ. ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಬೇಲ್ ಆಗಿದ್ದರೂ ಬಿಡುಗಡೆ ಭಾಗ್ಯವಿಲ್ಲ ಎಂಬಂತಾಗಿದೆ. ಅದಕ್ಕೆ ಕಾರಣವೇನು ಇಲ್ಲಿ ನೋಡಿ.

ರೇಣುಕಾಸ್ವಾಮಿ ಮರ್ಡರ್ ಬಳಿಕ ಶವ ಸಾಗಣೆ ಮತ್ತು ತಾವೇ ಕೊಲೆ ಮಾಡಿದ್ದಾಗಿ ಸುಳ್ಳು ಕಂಪ್ಲೇಂಟ್ ಕೊಡಲು ಹೋಗಿದ್ದ ನಿಖಿಲ್ ನಾಯಕ್, ಕೇಶವಮೂರ್ತಿ ಮತ್ತು ಕಾರ್ತಿಕ್ ಗೆ ಜಾಮೀನು ಮಂಜೂರು ಮಾಡಿ ವಾರವಾಗುತ್ತಾ ಬಂದಿದೆ. ಆದರೆ ಮೂವರೂ ಇನ್ನೂ ಬಿಡುಗಡೆಯಾಗಿಲ್ಲ.

ಈ ಮೂವರೂ 5 ಲಕ್ಷ ರೂ. ಹಣದಾಸೆಗೆ ಕೊಲೆ ಆಪಾದನೆ ಹೊತ್ತುಕೊಳ್ಳಲು ಹೋದವರು. ನೇರವಾಗಿ ಕೊಲೆಯಲ್ಲಿ ಭಾಗಿಯಾಗಿರಲಿಲ್ಲ. ಹೀಗಾಗಿ ಮೂವರಿಗೆ ಜಾಮೀನು ನೀಡಲಾಗಿದೆ. ಆದರೆ ಜಾಮೀನಿಗೆ ಶ್ಯೂರಿಟಿ ಕೊಡಲೂ ಗತಿಯಿಲ್ಲ ಎಂಬಂತಾಗಿದೆ ಇವರ ಸ್ಥಿತಿ.

ಶ್ಯೂರಿಟಿ ಕೊಡುವವರು ಇಲ್ಲದೇ ಈ ಮೂವರೂ ಇನ್ನೂ ಜಾಮೀನು ಸಿಕ್ಕರೂ ಜೈಲಿನಿಂದ ಬಿಡುಗಡೆಯಾಗಿಲ್ಲ. ಶ್ಯೂರಿಟಿ ಸಿಕ್ಕಬಳಿಕವಷ್ಟೇ ಜೈಲು ಅಧಿಕಾರಿಗಳಿಗೆ ಅಧಿಕೃತವಾಗಿ ನ್ಯಾಯಾಲಯದ ಆದೇಶ ಸಿಕ್ಕಿ ಮೂವರು ಬಿಡುಗಡೆಯಾಗಬೇಕಿದೆ. ಅಲ್ಲಿಯವರೆಗೆ ಈ ಮೂವರೂ ತುಮಕೂರು ಜೈಲಿನಲ್ಲಿ ಮುದ್ದೆ ಮುರಿಯುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments