Webdunia - Bharat's app for daily news and videos

Install App

ಸ್ವಲ್ಪ ದಯೆ ತೋರಿ ಬಿಟ್ಟಿದ್ರೂ ಸಾಕಿತ್ತು: ರೇಣುಕಾಸ್ವಾಮಿ ಫೋಟೋ ನೋಡಿ ತಾಯಿ ಕಣ್ಣೀರು

Krishnaveni K
ಗುರುವಾರ, 5 ಸೆಪ್ಟಂಬರ್ 2024 (12:13 IST)
ಬೆಂಗಳೂರು: ದರ್ಶನ್ ಆಂಡ್ ಗ್ಯಾಂಗ್ ನಿಂದ ತೀವ್ರವಾಗಿ ಹಲ್ಲೆಗೊಳಗಾದ ಬಳಿಕ ಪ್ರಾಣ ಭಿಕ್ಷೆ ಬೇಡುತ್ತಿರುವ ರೇಣುಕಾಸ್ವಾಮಿ ಫೋಟೋ ನೋಡಿ ಆತನ ಪೋಷಕರು ಕಣ್ಣೀರಿಟ್ಟಿದ್ದಾರೆ.

ದರ್ಶನ್ ಆಂಡ್ ಗ್ಯಾಂಗ್ ಬಟ್ಟೆ ಬಿಚ್ಚಿಸಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದಾಗ ಆತ ಕೈ ಮುಗಿದು ಬಿಟ್ಟು ಬಿಡುವಂತೆ ಅಂಗಲಾಚುತ್ತಾನೆ. ಇನ್ನೊಂದು ಫೋಟೋದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆತ ನೆಲದ ಮೇಲೆ ಬಿದ್ದಿರುವ ಫೋಟೋಗಳಿವೆ. ಈ ಫೋಟೋಗಳನ್ನು ನೋಡಿ ರೇಣುಕಾಸ್ವಾಮಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ನಮ್ಮ ಮಗ ಅಷ್ಟೆಲ್ಲಾ ಅಂಗಲಾಚುವಾಗಲಾದರೂ ಅವರಲ್ಲಿ ಒಬ್ಬರಿಗಾದೂ ಬಿಡೋಣ ಎನ್ನುವ ಮನಸ್ಸಾಗಲಿಲ್ಲವಾ? ಅವರಿಗೆ ಯಾರಿಗೂ ಮನುಷ್ಯತ್ವವೇ ಇಲ್ವಾ? ಇಂತಹ ಕ್ರೂರಿಗಳಿಗೆ ಕಾನೂನು ಮೂಲಕ ಎಷ್ಟು ಸಾಧ್ಯವೋ ಅಷ್ಟು ಕಠಿಣ ಶಿಕ್ಷೆಯಾಗಬೇಕು ಎಂದು ರೇಣುಕಾಸ್ವಾಮಿ ತಾಯಿ ಹೇಳಿದ್ದಾರೆ.ಸ್ವಲ್ಪ ದಯೆ ತೋರಿ ಬಿಟ್ಟಿದ್ದರೂ ನಾವು ಹೇಗೋ ಜೀವನಪರ್ಯಂತ ನೋಡಿಕೊಳ್ಳುತ್ತಿದ್ದೆವು. 

ಇನ್ನು, ನನ್ನ ಮಗನ ಸಾವಿನ ಬಳಿಕ ನಾವು ಪ್ರತಿನಿತ್ಯ ಜೀವಂತ ನರಕ ಅನುಭವಿಸುತ್ತಿದ್ದೇವೆ. ಈ ಫೋಟೋ ನೋಡಿದ ಮೇಲಂತೂ ನಮ್ಮ ದುಃಖ ಇನ್ನಷ್ಟು ಹೆಚ್ಚಾಗಿದೆ. ನಮ್ಮ ಮಗ ಕೊನೆ ಕ್ಷಣದಲ್ಲಿ ಎಷ್ಟು ನೋವು ಅನುಭವಿಸಿರಬಹುದು. ಏನೆಲ್ಲಾ ಬೇಡಿಕೊಂಡಿರಬಹುದು ಎಂದು ನೆನೆಸಿಕೊಂಡರೆ ಜೀವಂತ ಹೆಣವಾಗಿ ಬದುಕುತ್ತಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments