Webdunia - Bharat's app for daily news and videos

Install App

ರೇಣುಕಾಸ್ವಾಮಿ ಫೋಟೋ ನಕಲಿ: ದರ್ಶನ್ ಕೇಸ್ ಗೆ ಸಿಗುತ್ತಾ ಟ್ವಿಸ್ಟ್

Sampriya
ಬುಧವಾರ, 18 ಸೆಪ್ಟಂಬರ್ 2024 (16:36 IST)
Photo Courtesy X
ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಚಿತ್ರಹಿಂಸೆಗೆ ಒಳಗಾಗಿದ್ದ ರೇಣುಕಾಸ್ವಾಮಿ ಪ್ರಾಣಭಿಕ್ಷೆ ಬೇಡುತ್ತಿರುವ ಫೋಟೋ ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ದೊಡ್ಡ ಸಂಚಲನವನ್ನು ಮೂಡಿಸಿತ್ತು. ಈ ಸಂಬಂದ ಆರೋಪಿಗಳು ಇದು ಎಐ ಫೋಟೋ ಎಂದು ಹೇಳುತ್ತಿದ್ದಾರೆ.

 ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊನೆ ಕ್ಷಣಗಳ ಫೋಟೊಗಳು ಬಗ್ಗೆ ಆರೋಪಿಗಳು ಇದು ಎಐ ಫೋಟೋ ಎಂದು ಹೇಳಿದ್ದಾರೆ.

ಇದೀಗ ಪ್ರಕರಣ ಸಂಬಂಧ ಪೊಲೀಸರು ಆರೋಪಿ ವಿನಯ್ ಮೊಬೈಲ್‌ ಅನ್ನು ಮತ್ತೇ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದು, ಅದರ ವರದಿ ಬಂದ್ಮೇಲೆ ನಿಜಾಂಶ ಹೊರಬೀಳಲಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು 200ಕ್ಕೂ ಅಧಿಕ ಸಾಕ್ಷ್ಯಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಈಗಾಗಲೇ ಆರೋಪಿಗಳ ವಿರುದ್ಧದ 3991ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಜಾರ್ಚ್‌ಶೀಟ್‌ನಲ್ಲಿ ರೇಣುಕಾಸ್ವಾಮಿ ಪ್ರಾಣ ಭಿಕ್ಷೆಯನ್ನು ಬೇಡುತ್ತಿರುವುದು ಹಾಗೂ ಪ್ರಜ್ಞೆ ತಪ್ಪಿ ಕೆಳಕ್ಕೆ ಬಿದ್ದಿರುವ ಪೋಟೋವಿದೆ.

ಈ ಫೋಟೋ ವೈರಲ್ ಆಗಿತ್ತು. ವಿನಯ್ ಮೊಬೈಲ್ ಎಕ್ಸ್ಟ್ರಾಕ್ಟ್ ವೇಳೆ ರೇಣುಕಾಸ್ವಾಮಿಯ ರಕ್ತಸಿಕ್ತ ಫೋಟೊಗಳು ಪತ್ತೆಯಾಗಿದ್ದವು. ಇದೀಗ ಸಿಕ್ಕಿರುವ ಫೋಟೊಗಳನ್ನ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲು ಪೊಲೀಸರು ನಿರ್ಧಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments