ಕಾಡಿನ ಜನರಿಗಾಗಿ ಸಿಎಂ ಭೇಟಿ ಮಾಡಿದ ರಿಷಬ್ ಶೆಟ್ಟಿ

Webdunia
ಬುಧವಾರ, 8 ಮಾರ್ಚ್ 2023 (17:04 IST)
Photo Courtesy: Twitter
ಬೆಂಗಳೂರು: ಕಾಂತಾರ 2 ಸ್ಕ್ರಿಪ್ಟ್ ಕೆಲಸಗಳಿಗಾಗಿ ಕಾಡಿನಲ್ಲಿ ಓಡಾಡಿ ಮಾಹಿತಿ ಕಲೆ ಹಾಕಿದ್ದ ರಿಷಬ್ ಶೆಟ್ಟಿ ಈಗ ಕಾಡಿನ ಜನರ ಕಷ್ಟ ಪರಿಹರಿಸಲು ಮುಂದಾಗಿದ್ದಾರೆ.

ರಿಷಬ್ ಕಾಂತಾರ 2 ಸ್ಕ್ರಿಪ್ಟ್ ಬರೆಯಲೆಂದು ಕಾಡಂಚಿನ ಜನರ ಸಮಸ್ಯೆ, ಅರಣ್ಯ ಇಲಾಖೆಯ ಸಿಬ್ಬಂದಿಗಳ ಜೊತೆ ರಿಷಬ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕಾಡಿನ ಕೃಷಿಕರು ಆನೆ ದಾಳಿಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ, ಅರಣ್ಯ ಇಲಾಖೆ ಗಾರ್ಡ್ ಗಳು ಕಾಡ್ಗಿಚ್ಚಿನ ಸಮಸ್ಯೆ ಬಗ್ಗೆ ಹೇಳಿಕೊಂಡರು. ಈ ಎಲ್ಲಾ ವಿಷಯಗಳ ಬಗ್ಗೆ ಅರಣ್ಯ ಇಲಾಖೆಯ ಜೊತೆ ಚರ್ಚೆ ನಡೆಸಿದ್ದಾರಂತೆ.

ಅದೆಲ್ಲಾ ಗಮನದಲ್ಲಿಟ್ಟುಕೊಂಡು ಸುಮಾರು 20 ಅಂಶಗಳ ಪಟ್ಟಿ ತಯಾರಿಸಿ ರಿಷಬ್ ಶೆಟ್ಟಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಕೂಡಾ ಸ್ಪಂದಿಸಿದ್ದಾರೆ ಎಂದು ಸ್ವತಃ ರಿಷಬ್ ಹೇಳಿದ್ದಾರೆ. ಇಂತಹ ಮುಖ್ಯಮಂತ್ರಿಯನ್ನು ಪಡೆದಿದ್ದಕ್ಕೆ ನಾವು ಧನ್ಯ ಎಂದು ಹೇಳಬೇಕು. ಈ ರೀತಿಯ ಚಿಕ್ಕ ಪುಟ್ಟ ಸಮಸ್ಯೆಗಳನ್ನು ಗಮನಿಸಿ ಅದಕ್ಕೆ ಪರಿಹಾರ ನೀಡುವ ಕೆಲಸ ಅವರು ಮಾಡುತ್ತಾರೆ ಎಂದು ರಿಷಬ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments