Publish Date: Fri, 14 Apr 2023 (09:30 IST)
Updated Date: Fri, 14 Apr 2023 (09:33 IST)
ಮಂಗಳೂರು: ನಿನ್ನೆಯಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ನಟ, ನಿರ್ದೇಶಕ ರಿಷಬ್ ಶೆಟ್ಟಿ ಭೇಟಿಯಾಗಿದ್ದು ಭಾರೀ ಸುದ್ದಿಯಾಗಿತ್ತು.
ಸಿಎಂ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿದ್ದ ರಿಷಬ್ ಶೆಟ್ಟಿ ಪರಸ್ಪರ ಭೇಟಿಯಾಗಿದ್ದರು. ಇದರಿಂದಾಗಿ ರಿಷಬ್ ಬಿಜೆಪಿ ಪರ ಪ್ರಚಾರ ಮಾಢಬಹುದು ಎಂಬ ಸುದ್ದಿ ಹಬ್ಬಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಷಬ್ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಭೇಟಿ ಆಯಿತು. ಇದಕ್ಕೆ ರಾಜಕೀಯ ಬಣ್ಣ ಬೇಡ. ಕಾಂತಾರದ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೀತಿ ಆಶೀರ್ವಾದವಿರಲಿ ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.