Webdunia - Bharat's app for daily news and videos

Install App

ರಿಷಬ್ ಶೆಟ್ಟಿ ಶಿವಾಜಿ ಮಹಾರಾಜ ಸಿನಿಮಾ ಒಪ್ಪಿಕೊಂಡಿದ್ದು ಇದೊಂದೇ ಕಾರಣಕ್ಕೆ

Krishnaveni K
ಬುಧವಾರ, 4 ಡಿಸೆಂಬರ್ 2024 (11:59 IST)
ಬೆಂಗಳೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಾಯಕರಾಗಿ ನಿನ್ನೆ ಹೊಸ ಸಿನಿಮಾ ಘೋಷಣೆಯಾಗಿದ್ದು ಇದಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ಶಿವಾಜಿ ಮಹಾರಾಜನ ಕತೆಯಿರುತ್ತದೆ.

ಬಾಲಿವುಡ್ ನಿರ್ಮಾಪಕ ಕಮ್ ನಿರ್ದೇಶಕ ಸಂದೀಪ್ ಸಿಂಗ್ ಸಿನಿಮಾ ಇದಾಗಿದೆ. ಈ ಸಿನಿಮಾವನ್ನು ಒಪ್ಪಿಕೊಳ್ಳಲು ಕಾರಣವೇನೆಂದು ರಿಷಬ್ ಈಗ ಹೇಳಿಕೊಂಡಿದ್ದಾರೆ. ಕಾಂತಾರ ಸಿನಿಮಾ ಬಳಿಕ ದೇಶದಲ್ಲೆಡೆ ಗುರುತಿಸಿಕೊಂಡಿರುವ ರಿಷಬ್ ಈಗ ಬಾಲಿವುಡ್ ಗೂ ಕಾಲಿಡುತ್ತಿದ್ದಾರೆ.

ಈ ಸಿನಿಮಾವನ್ನು ಒಪ್ಪಿಕೊಳ್ಳಲು ಕಾರಣ ತಮಗೆ ಶಿವಾಜಿ ಮಹಾರಾಜರ ಮೇಲಿನ ಗೌರವ, ಅಭಿಮಾನ ಎಂದು ಅವರು ಹೇಳಿದ್ದಾರೆ. ಇದು ಕೇವಲ ಸಿನಿಮಾವಲ್ಲ. ಬೃಹತ್ ಆಗಿ ಬೆಳೆದಿದ್ದ ಮುಘಲ್ ರಾಜರ ವಿರುದ್ಧ ಸವಾಲುಗಳನ್ನು ಮೆಟ್ಟಿ ನಿಂತು ಹೋರಾಡಿದ ಕೆಚ್ಚೆದೆಯ ವೀರನ ಕತೆ. ಶಿವಾಜಿ ಮಹಾರಾಜನನ್ನು ನಮ್ಮ ದೇಶದ ಇತಿಹಾಸ ಯಾವತ್ತಿಗೂ ಮರೆಯದು ಎಂದು ರಿಷಬ್ ಹೇಳಿಕೊಂಡಿದ್ದಾರೆ.

ಈ ಸಿನಿಮಾದೊಂದಿಗೆ ರಿಷಬ್ ಈಗ ಏಕಕಾಲಕ್ಕೆ ಮೂರು ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ನಟಿಸಿದಂತಾಗುತ್ತದೆ. ಈ ಪೈಕಿ ಕನ್ನಡದ ಕಾಂತಾರ ಶೂಟಿಂಗ್ ಕೊನೆಯ ಹಂತದಲ್ಲಿದ್ದು ಮುಂದಿನ ವರ್ಷ ತೆರೆ ಕಾಣುತ್ತಿದೆ. ಇದಾದ ಬಳಿಕ ತೆಲುಗಿನ ಜೈ ಹನುಮಾನ್ ಸಿನಿಮಾದಲ್ಲಿ ಆಂಜನೇಯನ ಪಾತ್ರ ಮಾಡಲಿದ್ದಾರೆ. ಅದರ ಜೊತೆಗೆ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ಘೋಷಣೆಯಾಗಿದ್ದು ಈ ಮೂರೂ ಸಿನಿಮಾಗಳೂ ಪ್ಯಾನ್ ಇಂಡಿಯಾ ಸಿನಿಮಾಗಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments