Webdunia - Bharat's app for daily news and videos

Install App

ಕಾಂತಾರ ಸಿನಿಮಾ ಹೇಗಿದೆ? ಮತ್ತೆ ಅವಾರ್ಡ್ ಗೆಲ್ತಾರೆ ರಿಷಬ್ ಶೆಟ್ರು ಎಂದ ಫ್ಯಾನ್ಸ್

Webdunia
ಶುಕ್ರವಾರ, 30 ಸೆಪ್ಟಂಬರ್ 2022 (09:20 IST)
Photo Courtesy: Twitter
ಬೆಂಗಳೂರು: ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಘರ್ಷದ ಕತೆಯನ್ನು ಕರಾವಳಿಯ ಶ್ರೀಮಂತ ಸಂಸ್ಕೃತಿಯ ಸೊಗಡಿನ ಜೊತೆಗೆ ಪ್ರೇಕ್ಷಕರಿಗೆ ಕಟ್ಟಿ ಕೊಟ್ಟ ಸಿನಿಮಾ ಕಾಂತಾರ.

ಮೊದಲ ಶೋ ನೋಡಿದ ಜನ ನಿಜಕ್ಕೂ ಇದು ರಿಷಬ್ ಬತ್ತಳಿಕೆಯಿಂದ ಬಂದ ಮತ್ತೊಂದು ಅದ್ಭುತ, ಕನ್ನಡ ಸಿನಿಮಾ ರಂಗದ ಮತ್ತೊಂದು ಹೆಮ್ಮೆಯ ಸಿನಿಮಾ ಎಂದು ಕೊಂಡಾಡಿದ್ದಾರೆ. ಈ ಹಿಂದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ರಾಷ್ಟ್ರಪ್ರಶಸ್ತಿ ಪಡೆದಿದ್ದ ರಿಷಬ್ ಈ ಸಿನಿಮಾ ಮೂಲಕವೂ ಅವಾರ್ಡ್ ಗೆಲ್ಲೋದು ಗ್ಯಾರಂಟಿ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಸಿನಿಮಾಗಳಲ್ಲಿ ಕರಾವಳಿಯ ಭೂತಕೋಲ ಮತ್ತು ಕಂಬಳ ಕ್ರೀಡೆಯನ್ನು ಇಷ್ಟರಮಟ್ಟಿಗೆ ತೋರಿಸಿದ ಉದಾಹರಣೆ ಇಲ್ಲ. ಆ ಮಟ್ಟಿಗೆ ಮೂಲ ಆಶಯಗಳಿಗೆ ಧಕ್ಕೆಯಾಗದಂತೇ ಮೈನವಿರೇಳಿಸುವಂತೆ ರಿಷಬ್ ಪ್ರೇಕ್ಷಕರ ಎದುರು ಭೂತಕೋಲವೆಂಬ ದೈವ ಕಲೆಯನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲೂ ಕೊನೆಯ 15 ನಿಮಿಷ ಕ್ಲೈಮ್ಯಾಕ್ಸ್ ಅಂತೂ ಅದ್ಭುತ ಎಂಬುದು ಪ್ರೇಕ್ಷಕರ ಅಭಿಪ್ರಾಯ. ಒಬ್ಬ ನಿರ್ದೇಶಕನಾಗಿ ಜೊತೆಗೆ ಒಬ್ಬ ನಟನಾಗಿ ರಿಷಬ್ ಇಲ್ಲಿ ಎಲ್ಲರ ಗೆದ್ದಿದ್ದಾರೆ. ಜೊತೆಗೆ ತಮಗೆ ಸಿಕ್ಕ ಪಾತ್ರವನ್ನು ಹೊಸಬರೆಂದು ತೋರಿಸಿಕೊಳ್ಳದೇ ಸಪ್ತಮಿ ಗೌಡ ಚೊಕ್ಕದಾಗಿ ನಿಭಾಯಿಸಿದ್ದಾರೆ. ಅಂತೂ ಇದು ಕನ್ನಡಿಗರು ಎಂದೆಂದೂ ಮರೆಯದ ಸಿನಿಮಾ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments