ಕನ್ನಡವೇ ಫಸ್ಟ್ ಎನ್ನುತ್ತಿದ್ದ ರಿಷಬ್ ಶೆಟ್ಟಿ ಎರಡನೇ ತೆಲುಗು ಸಿನಿಮಾ ಒಪ್ಪಿಕೊಂಡ್ರು

Krishnaveni K
ಬುಧವಾರ, 27 ನವೆಂಬರ್ 2024 (15:51 IST)
ಬೆಂಗಳೂರು: ಕಾಂತಾರ ಸಿನಿಮಾ ಸಕ್ಸಸ್ ಆದ ಬಳಿಕ ಬೇರೆ ಭಾಷೆಗಳಲ್ಲಿ ಸಾಕಷ್ಟ ಆಫರ್ ಬಂದರೂ ಕನ್ನಡವೇ ನನ್ನ ಮೊದಲ ಆದ್ಯತೆ ಎಂದಿದ್ದ ರಿಷಬ್ ಶೆಟ್ಟಿ ಈಗ ತೆಲುಗಿನಲ್ಲಿ ಎರಡನೇ ಸಿನಿಮಾ ಒಪ್ಪಿಕೊಂಡಿದ್ದಾರೆ.

ಕಾಂತಾರ ಚಾಪ್ಟರ್ 1 ಸಿನಿಮಾ ಚಿತ್ರೀಕರಣದ ನಡುವೆಯೇ ರಿಷಬ್ ತೆಲುಗಿನಲ್ಲಿ ಜೈ ಹನುಮಾನ್ ಸಿನಿಮಾದಲ್ಲಿ ನಟಿಸುತ್ತಿರುವ ಸುದ್ದಿ ಕೊಟ್ಟಿದ್ದರು. ಆಂಜನೇಯನ ಪಾತ್ರದಲ್ಲಿ ರಿಷಬ್ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿತ್ತು. ಇದರ ಬೆನ್ನಲ್ಲೇ ರಿಷಬ್ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡ ಸುದ್ದಿ ಬಂದಿದೆ.

ಈ ಬಾರಿ ತೆಲುಗು ಸಿನಿಮಾಗೆ ನಾಯಕನಾಗುತ್ತಿರುವ ಸುದ್ದಿ ಬಂದಿದೆ. ರಾಜಮೌಳಿ ಸಿನಿಮಾಗಳಲ್ಲಿ  ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅಶ್ವಿನ್ ಗಂಗರಾಜು ನಿರ್ದೇಶನ ಮಾಡಲಿರುವ ಹೊಸ ಸಿನಿಮಾಗೆ ರಿಷಬ್ ನಾಯಕರಾಗುತ್ತಿದ್ದಾರೆ. ಇದು ತೆಲುಗಿನಲ್ಲಿ ರಿಷಬ್ ಗೆ ಎರಡನೇ ಸಿನಿಮಾ.

ಇದರ ಜೊತೆಗೆ ಬಾಲಿವುಡ್ ನಲ್ಲಿ ಆಶುತೋಶ್ ಗೋವರಿಕರ್ ನಿರ್ದೇಶನದ ಸಿನಿಮಾದಲ್ಲೂ ರಿಷಬ್ ನಟಿಸಲಿದ್ದಾರೆ. ಈ ಮೂಲಕ ಕನ್ನಡದಲ್ಲಿ ಏಕೈಕ ಸಿನಿಮಾ ಮಾಡುತ್ತಿರುವ ರಿಷಬ್ ಈಗಾಗಲೇ ಪರಭಾಷೆಗಳಲ್ಲಿ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವುದು ಕನ್ ಫರ್ಮ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಯವಿಟ್ಟು ಶೇರ್ ಮಾಡಿ, very important: ಕುತೂಹಲ ಮೂಡಿಸಿದ ನಟ ಪ್ರಥಮ್ ಪೋಸ್ಟ್‌

ಹೃದಯಘಾತಕ್ಕೊಳಗಾದ ಮೃತ ವರೀಂದರ್ ಘುಮಾನ್ ಬಗ್ಗೆ ತಿಳಿಯದ ಕೆಲ ಅಚ್ಚರಿ ವಿಚಾರಗಳು ಇಲ್ಲಿದೆ

ಕಾಂತಾರ ಸೂಪರ್ ಹಿಟ್ ಬೆನ್ನಲ್ಲೇ ಸಿದ್ದಿವಿನಾಯಕನ ದರ್ಶನ ಪಡೆದ ರಿಷಬ್ ಶೆಟ್ಟಿ

My god, it was mind-blowing: ರಿಷಬ್ ನಟನೆ ನಿರ್ದೇಶನಕ್ಕೆ ಸ್ಟಾರ್ ಡೈರೆಕ್ಟರ್ ಅಟ್ಲೀ ಫಿದಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments