Webdunia - Bharat's app for daily news and videos

Install App

ಕಾಂತಾರ ಸಿನಿಮಾಗಾಗಿ ಶಕ್ತಿ ದೇವತೆಗಳ ದರ್ಶನ ಪಡೆಯುತ್ತಿದ್ದಾರಾ ರಿಷಬ್ ಶೆಟ್ಟಿ

Krishnaveni K
ಶುಕ್ರವಾರ, 24 ಮೇ 2024 (12:03 IST)
Photo Courtesy: Twitter
ಚಿಕ್ಕಮಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ನಡುವೆ ರಿಷಬ್ ಶೆಟ್ಟಿ ಇದೀಗ ನಾಡಿನ ಶಕ್ತಿದೇವತೆಗಳ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇದೆಲ್ಲಾ ಕಾಂತಾರ ಸಿನಿಮಾಗಾಗಿ ಎನ್ನಲಾಗಿದೆ.

ಮೊನ್ನೆಯಷ್ಟೇ ಚಿಕ್ಕಮಗಳೂರಿಗೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದರು. ಅಲ್ಲಿನ ಪ್ರಸಿದ್ಧ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅದಾದ ಬಳಿಕ ಮಗಳ ಅಕ್ಷರಭ್ಯಾಸಕ್ಕೆ ಶಾರದಾಂಬೆಯ ಸನ್ನಿಧಿಗೆ ತೆರಳಿದ್ದರು. ಇದಾದ ಬಳಿಕ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಕಾಂತಾರ ಸಿನಿಮಾ ಶೂಟಿಂಗ್ ಈಗಾಗಲೇ ಆರಂಭವಾಗಿದೆ. ಇದರ ನಡುವೆ ರಿಷಬ್ ದೇವಾಲಯಗಳಿಗೆ ಭೇಟಿ ನೀಡಲು ಕಾರಣವೂ ಇದೆ ಎನ್ನಲಾಗಿದೆ. ಕಾಂತಾರ ದೈವ, ದೇವರ ಕುರಿತಾದ ಸಿನಿಮಾ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಶಕ್ತಿದೇವತೆಗಳಿಗೆ ಪೂಜೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.

ಈ ಮೊದಲು ಕಾಂತಾರ ಮೊದಲ ಸಿನಿಮಾ ಮಾಡುವಾಗಲೂ ರಿಷಬ್ ನಾಡಿನ ಶಕ್ತಿದೇವತೆಗಳಿಗೆ ಪೂಜೆ ಸಲ್ಲಿಸಿದ್ದರಂತೆ. ಇದನ್ನು ಅವರೇ ಸಂದರ್ಶನಗಳಲ್ಲಿ ಹೇಳಿದ್ದರು. ಇದೀಗ ಕಾಂತಾರ ಚಾಪ್ಟರ್ 1 ಕ್ಕೂ ಯಾವುದೇ ಅಡ್ಡಿಯಾಗದಂತೆ ದೇವರ ಸೇವೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಮುಂದಿನ ಸುದ್ದಿ
Show comments