Select Your Language

Notifications

webdunia
webdunia
webdunia
webdunia

ತವರೂರ ಆಸ್ಪತ್ರೆ ಅಭಿವೃದ್ಧಿಗೆ ಮುಂದಾದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ
ಬೆಂಗಳೂರು , ಮಂಗಳವಾರ, 6 ಅಕ್ಟೋಬರ್ 2020 (10:25 IST)
ಬೆಂಗಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಬಳಿಕ ಗಡಿನಾಡ ಶಾಲೆಗಳ ದುಸ್ಥಿತಿ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ಆಸ್ಪತ್ರೆಯೊಂದರ ಅಭಿವೃದ್ಧಿಗೆ ಮುಂದಾಗಿದ್ದಾರೆ.


ತಮ್ಮ ತವರು ಉಡುಪಿ ಜಿಲ್ಲೆಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. 60 ವರ್ಷಗಳಷ್ಟು ಹಳೆಯ ಆಸ್ಪತ್ರೆ ಆಧುನಿಕ ಸೌಲಭ್ಯಗಳಿಲ್ಲದೇ ದುಸ್ಥಿತಿಯಲ್ಲಿದೆ. ಈ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಲು ರಿಷಬ್ ಸಹಾಯ ಮಾಡಲಿದ್ದಾರೆ. ಅವರ ಸಾಮಾಜಿಕ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಮೀಟ್ಸ್ ಪವನ್ ಕಲ್ಯಾಣ್