Webdunia - Bharat's app for daily news and videos

Install App

ರಾಬರ್ಟ್ ವಿಜಯಯಾತ್ರೆ ರದ್ದುಗೊಳಿಸಿದ ಚಿತ್ರತಂಡ

Webdunia
ಭಾನುವಾರ, 28 ಮಾರ್ಚ್ 2021 (09:07 IST)
ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ನಾಳೆಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ವಿಜಯಯಾತ್ರೆ ನಾಳೆಯಿಂದ ಆರಂಭವಾಗಬೇಕಾಗಿತ್ತು. ಆದರೆ ಅದೀಗ ರದ್ದಾಗಿದೆ.

 
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿತ್ರತಂಡ ರಾಬರ್ಟ್ ವಿಜಯಯಾತ್ರೆಯನ್ನು ರದ್ದುಗೊಳಿಸಿದೆ. ಮಾರ್ಚ್ 29 ರಿಂದ ಏಪ್ರಿಲ್ 1 ರವರೆಗೆ ರಾಜ್ಯದ ವಿವಿಧ ಭಾಗಗಳಿಗೆ ನಾಯಕ ದರ್ಶನ್ ಹಾಗೂ ಚಿತ್ರತಂಡ ಪ್ರವಾಸ ಕೈಗೊಂಡು ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಲು ತೀರ್ಮಾನಿಸಿತ್ತು.

ಆದರೆ ಕೊರೋನಾ ಹಿನ್ನಲೆಯಲ್ಲಿ ವಿಜಯಯಾತ್ರೆ ರದ್ದುಗೊಳಿಸುತ್ತಿರುವುದಾಗಿ ಸ್ವತಃ ದರ್ಶನ್ ಪ್ರಕಟಿಸಿದ್ದಾರೆ. ‘ನೀವು ನಮ್ಮ ಚಿತ್ರಕ್ಕೆ ಅಪಾರ ಬೆಂಬಲವನ್ನು ನೀಡಿ ದೊಡ್ಡಮಟ್ಟದಲ್ಲಿ ಯಶಸ್ವಿಗೊಳಿಸಿದ್ದೀರಿ. ಅದಕ್ಕೆ ವಿಜಯಯಾತ್ರೆ ಮೂಲಕ ನಿಮ್ಮ ಊರಿಗೆ ಬಂದು ಧನ್ಯವಾದ ಹೇಳಲು ಬಯಸಿದ್ದೆವು. ಈ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಕಾರಣ ಎಲ್ಲೆಡೆ ಹೋಗಲು ಅನುಮತಿ ಸಿಗುವುದು ಕಷ್ಟವಾಗಿದೆ. ನಿಮ್ಮ ಆರೋಗ್ಯವೇ ನಮ್ಮ ಮತ್ತು ಸರ್ಕಾರದ ಮೊದಲ ಆದ್ಯತೆ. ದಯಮಾಡಿ ಮಾಸ್ಕ್ ಧರಿಸಿ ಜಾಗ್ರತೆಯಲ್ಲಿರಿ. ಈಗಿನ ಪರಿಸ್ಥಿತಿ ಸುಧಾರಿಸುತ್ತಿದ್ದಂತೇ ನಾವು ಖಂಡಿತಾ ನಿಮ್ಮ ಊರಿಗೆ ಬರುತ್ತೇವೆ’ ಎಂದು ದರ್ಶನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಒಂದು ಹಿಟ್ ಆದ ಮೇಲೆ 50 ಕೋಟಿಗೆ ಡಿಮ್ಯಾಂಡ್ ಮಾಡಿದ್ರಂತೆ… ಇಲ್ಲಾ ಸಾರ್ ಇನ್ನೂ ಮೇಲೆ ಎಂದ ಯಶ್: ಇದು ಗತ್ತು..

ಮುಂದಿನ ಸುದ್ದಿ
Show comments