ಪುನೀತ್ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ರಾಕಿಂಗ್ ಸ್ಟಾರ್ ಯಶ್! ಕಾರಣವೇನು ಗೊತ್ತಾ?!

Webdunia
ಸೋಮವಾರ, 7 ಜನವರಿ 2019 (09:24 IST)
ಬೆಂಗಳೂರು: ಐಟಿ ದಾಳಿ ಹಿನ್ನಲೆಯಲ್ಲಿ ಎರಡು ದಿನ ಅಕ್ಷರಶಃ ಗೃಹಬಂಧನದಲ್ಲಿದ್ದ ರಾಕಿಂಗ್ ಸ್ಟಾರ್ ಯಶ್, ಅದಾದ ಬಳಿಕ ತಮ್ಮ ಪತ್ನಿ, ಮಗುವನ್ನು ನೋಡಲು ಓಡೋಡಿ ಹೋಗಿದ್ದರು.


ಇದೆಲ್ಲಾ ಗಡಿಬಿಡಿ ನಡುವೆ ಅವರಿಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ನಟಸಾರ್ವಭೌಮ ಚಿತ್ರದ ಅಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳ ಬಳಿ ಸಾರಿ ಕೇಳಿದ್ದಾರೆ.

‘ಅನಿವಾರ್ಯ ಕಾರಣಗಳ ಹಿನ್ನಲೆಯಲ್ಲಿ ವಿಮಾನ ಕೈ ತಪ್ಪಿದ್ದರಿಂದ ಹುಬ್ಬಳ್ಳಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರದ ಅಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ.

ನನ್ನ ಮೇಲೆ ಅಪಾರ ಪ್ರೀತ್ಯಾದರಗಳನ್ನು ಹೊಂದಿದ ಹುಬ್ಬಳ್ಳಿ ಭಾಗದ ಅಭಿಮಾನಿಗಳ ಕ್ಷಮೆ ಕೋರುತ್ತಿದ್ದೇನೆ. ಪವರ್ ಸ್ಟಾರ್ ಅಪ್ಪುರವರು, ಸಹೃದಯಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ರವರು, ಸಹೋದರ ಪವನ್ ಒಡೆಯರ್ ರವರು, ಛಾಯಾಗ್ರಾಹಕ ವೈದಿ ಸೇರಿದಂತೆ ಇಡೀ ನಟಸಾರ್ವಭೌಮ ತಂಡಕ್ಕೆ ಶುಭ ಕೋರುತ್ತೇನೆ. ಅಪ್ಪುರವರ ಮೇಲಿನ ನಿಮ್ಮ ಪ್ರೀತಿ ಅವರಿಗೆ ಇನ್ನೂ ಹೆಚ್ಚಿನ ಶಕ್ತಿ ತುಂಬಲಿ’ ಎಂದು ಯಶ್ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments