Webdunia - Bharat's app for daily news and videos

Install App

ಬಾಲಿವುಡ್ ರಾಮಾಯಣ ಟೀಂ ಸೇರಿಕೊಂಡ ಯಶ್: ಬಾಲಿವುಡ್ ನಲ್ಲಿ ಯಶ್ ಡಬಲ್ ಧಮಾಕ

Krishnaveni K
ಶುಕ್ರವಾರ, 12 ಏಪ್ರಿಲ್ 2024 (12:27 IST)
Photo Courtesy: Twitter
ಮುಂಬೈ: ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ ಎಂದು ಹಲವು ದಿನಗಳಿಂದ ಸುದ್ದಿಯಾಗಿತ್ತು. ಆ ಸುದ್ದಿಗಳಿಗೆ ಈಗ ಸ್ಪಷ್ಟನೆ ಸಿಕ್ಕಿದೆ.

ಯಶ್ ರಾಮಾಯಣ ಸಿನಿಮಾ ತಂಡ ಸೇರಿಕೊಂಡಿರುವುದು ನಿಜ. ಆದರೆ ಕೇವಲ ನಟನಾಗಿ ಅಲ್ಲ, ನಿರ್ಮಾಪಕನಾಗಿಯೂ ಕೂಡಾ. ಹೌದು, ಬಾಲಿವುಡ್ ನಲ್ಲಿ ನಿತೀಶ್ ತಿವಾರಿ ನಿರ್ದೇಶಿಸುತ್ತಿರುವ ರಾಮಾಯಣ ಸಿನಿಮಾಗೆ ನಮಿತ್ ಮಲ್ಹೋತ್ರಾ ಬಂಡವಾಳ ಹೂಡುತ್ತಿದ್ದು ಅವರಿಗೆ ಯಶ್ ಕೂಡಾ ಸಾಥ್ ಕೊಡುತ್ತಿದ್ದಾರೆ.

ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಸಂಸ್ಥೆ ರಾಮಾಯಣ ಸಿನಿಮಾಗೆ ಬಂಡವಾಳ ಹಾಕುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಯಶ್ ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸುವುದು ನನ್ನ ಕನಸು. ಅದರ ನಿಟ್ಟಿನಲ್ಲಿ ನಾನು ಅತ್ಯುತ್ತಮ ವಿಎಫ್ ಸಿ ಸ್ಟುಡಿಯೋ ಕಂಡುಕೊಂಡಿದ್ದೇನೆ. ಹೀಗೆ ಮಾತನಾಡುತ್ತಿದ್ದಾಗ ರಾಮಾಯಣ ಕತೆ ಚರ್ಚೆಯಾಯಿತು.  ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ ಇದಾಗಿದ್ದು, ಈ ಮಹಾಕಾವ್ಯವನ್ನು ಸಿನಿಮಾವಾಗಿ ಹೊರತರುತ್ತಿದ್ದೇವೆ ಎಂದಿದ್ದಾರೆ.

ರಾಮಾಯಣ ಸಿನಿಮಾದಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನ ಪಾತ್ರ ಮಾಡುತ್ತಿದ್ದಾರೆ. ಅದಕ್ಕೆ ಅವರು ಈಗಾಗಲೇ ವರ್ಕೌಟ್ ಮಾಡಿ ರೆಡಿ ಆಗುತ್ತಿದ್ದಾರೆ. ರಣಬೀರ್ ಕಪೂರ್ ಗೆ ಜೋಡಿಯಾಗಿ ಸೀತೆಯ ಪಾತ್ರವನ್ನು ಸಾಯಿ ಪಲ್ಲವಿ ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments