Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಬೆಂಗಾವಲು ಪಡೆಯ ಅವಾಂತರ: ಯುವಕನ ಕಾಲ ಮೇಲೆ ಹರಿದ ಕಾರು

Krishnaveni K
ಗುರುವಾರ, 29 ಫೆಬ್ರವರಿ 2024 (15:08 IST)
ಬಳ್ಳಾರಿ: ಇಂದು ಬಳ್ಳಾರಿಯ ಅಮೃತೇಶ್ವರ ದೇವಾಲಯದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಬಂದಿದ್ದ ರಾಕಿಂಗ್ ಸ್ಟಾರ್  ಯಶ್ ಅವರ ಬೆಂಗಾವಲು ಪಡೆಯ ವಾಹನ ಅಭಿಮಾನಿ ಯುವಕನ ಕಾಲ ಮೇಲೆ ಹರಿದಿದೆ.

ಯಶ್ ಬರುತ್ತಾರೆಂದರೆ ಅಲ್ಲಿ ಅಭಿಮಾನಿಗಳ ಸಾಗರವೇ ಸೇರುತ್ತದೆ. ಇಂದೂ ಕೂಡಾ ರಾಕಿ ಭಾಯಿ ಬರುವ ಸುದ್ದಿ ತಿಳಿದು ದೇವಾಲಯದ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು. ಅವರನ್ನು ನೋಡಲೆಂದು ಅವರ ಜೊತೆ ಸೆಲ್ಫೀ ತೆಗೆದುಕೊಳ್ಳಲೆಂದು ಜನ ನುಗ್ಗಿ ಬಂದಿದ್ದಾರೆ.

ಯಶ್ ಕಾರು ಬರುತ್ತಿದ್ದಂತೇ ಅವರ ಕಾರಿಗೇ ಜನ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ದುರ್ಘಟನೆ ನಡೆದಿದೆ. ಯಶ್ ಕಾರನ್ನು ಬೆನ್ನು ಹತ್ತಿದ್ದ ಯುವಕನೊಬ್ಬನ ಮೇಲೆ ಬೆಂಗಾವಲು ಪಡೆಯ ವಾಹನ ಹರಿದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯ ಗಂಭೀರವಲ್ಲ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಯಶ್ ಬರ್ತ್ ಡೇ ದಿನ ಇಬ್ಬರು ಯುವಕರು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದರು. ಅವರನ್ನು ನೋಡಲು ಯಶ್ ಬಂದಾಗ ಅವರ ಬೆಂಗಾವಲು ಪಡೆಯ ವಾಹನಕ್ಕೆ ದ್ವಿಚಕ್ರ ವಾಹನ ಢಿಕ್ಕಿಯಾಗಿ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದ. ಇದೀಗ ಮತ್ತೊಂದು ದುರ್ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments