Publish Date: Tue, 16 Apr 2019 (07:55 IST)
Updated Date: Tue, 16 Apr 2019 (07:56 IST)
ಮಂಡ್ಯ: ಮಂಡ್ಯ ಚುನಾವಣಾ ರ್ಯಾಲಿಯಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಏಕ ವಚನ ಪ್ರಯೋಗ ನಡೆಸಿ ವಾಗ್ದಾಳಿ ನಡೆಸಿದ್ದಕ್ಕೆ ಯಶ್ ತಿರುಗೇಟು ನೀಡಿದ್ದಾರೆ.
ಯಾವನೋ ಅವನು ಯಶ್ ನಮ್ಮಂಥ ನಿರ್ಮಾಪಕರಿದ್ದರೇ ಇವರೆಲ್ಲಾ ನಟರಾಗೋದು. ನನಗೆ ನೋವಾಗಬಾರದು ಎಂದು ನಮ್ಮ ಕಾರ್ಯಕರ್ತರು ಸುಮ್ಮನಿದ್ದಾರೆ ಎಂದಿದ್ದರು.
ಸಿಎಂ ಹೇಳಿಕೆಗೆ ತಿರುಗೇಟು ನೀಡಿರುವ ಯಶ್ ‘ರಾಜ್ಯದ ಆರೂವರೆ ಕೋಟಿ ಜನರ ಮುಖ್ಯಮಂತ್ರಿಯಾಗಿ ಈ ರೀತಿ ಮಾತನಾಡುವುದು ಸರಿಯಾ? ನಾವು ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುವುದೇ ತಪ್ಪಾ? ಕಾರ್ಯಕರ್ತರು ಸುಮ್ಮನಿದ್ದಾರೆ ಎಂದರೆ ಅರ್ಥವೇನು? ಯಾವುದು ಸರಿ ಯಾವುದು ತಪ್ಪು ಎಂದು ಜನರೇ ತೀರ್ಮಾನ ಮಾಡುತ್ತಾರೆ’ ಎಂದು ಯಶ್ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ