Webdunia - Bharat's app for daily news and videos

Install App

ಬರ್ತ್ ಡೇಗೆ ಮುನ್ನ ರಾಕಿಂಗ್ ಸ್ಟಾರ್ ಯಶ್ ಈ ದಿಡೀರ್ ನಿರ್ಧಾರಕ್ಕೆ ಕಾರಣವೂ ಇದೆ

Krishnaveni K
ಸೋಮವಾರ, 30 ಡಿಸೆಂಬರ್ 2024 (20:21 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಕೇವಲ ಒಂದು ವಾರ ಬಾಕಿಯಿದೆ. ಈ ಹಿನ್ನಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಯಶ್ ಮಹತ್ವದ ಸಂದೇಶವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದು ಅದಕ್ಕೆ ಕಾರಣವೂ ಇದೆ.
 
ಜನವರಿ 8 ರಂದು ಯಶ್ ಬರ್ತ್ ಡೇ ಇದೆ. ಕಳೆದ ಎರಡು ವರ್ಷಗಳಿಂದ ಯಶ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಲ್ಲ. ಆದರೆ ಈ ಬಾರಿಯಾದರೂ ಅಭಿಮಾನಿಗಳಿಗೆ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸುಳ್ಳಾಗಿದೆ. ಶೂಟಿಂಗ್ ಕಾರಣಕ್ಕೆ ಬೇರೆ ಊರಿನಲ್ಲಿರುವ ಕಾರಣ ಮನೆ ಹತ್ರ ಅಭಿಮಾನಿಗಳಿಗೆ ಸಿಗಲ್ಲ, ಯಾರೂ ಬರಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.

ಆದರೆ ಯಶ್ ಇಂತಹದ್ದೊಂದು ಮನವಿ ಮಾಡುತ್ತಿದ್ದಂತೇ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಯಶ್ ಹೀಗೆ ವಾರಕ್ಕೆ ಮುಂಚಿತವಾಗಿ ಅಭಿಮಾನಿಗಳಿಗೆ ಸಂದೇಶ ನೀಡಿರುವುದಕ್ಕೆ ಕಾರಣವೂ ಇದೆ. ಕಳೆದ ವರ್ಷ ಅವರ ಹುಟ್ಟುಹಬ್ಬದಂದೇ ನಡೆದಿದ್ದ ದುರಂತವೇ ಇದಕ್ಕೆ ಕಾರಣ.

ಯಶ್ ಕಳೆದ ವರ್ಷವು ಹುಟ್ಟುಹಬ್ಬದ ದಿನ ಗೋವಾದಲ್ಲಿ ಶೂಟಿಂಗ್ ನಲ್ಲಿದ್ದರು. ಈ ಕಾರಣಕ್ಕೆ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿರಲಿಲ್ಲ. ಆದರೆ ಅವರ ಅಭಿಮಾನಿಗಳು ಬಿಡಬೇಕಲ್ಲ? ಯಶ್ ಕಟೌಟ್ ಹಾಕಿ, ಬ್ಯಾನರ್ ಹಾಕಿ ಹುಟ್ಟುಹಬ್ಬಕ್ಕೆ ತಯಾರಿ ನಡೆಸಿದ್ದರು. ಆದರೆ ಈ ನಡುವೆ ಇಬ್ಬರು ಅಭಿಮಾನಿಗಳು ಬ್ಯಾನರ್ ಕಟ್ಟುವಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದರು. ಹೀಗಾಗಿ ಯಶ್ ತಮ್ಮ ಇದ್ದಬದ್ದ ಕೆಲಸವನ್ನೆಲ್ಲಾ ಬಿಟ್ಟು ಅಭಿಮಾನಿಗಳ ಮನೆಗೆ ಬಂದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಲ್ಲದೆ, ಪರಿಹಾರವನ್ನೂ ಘೋಷಿಸಿದ್ದರು. ಜೊತೆಗೆ ಅಭಿಮಾನ ಎಂದು ಯಾರೂ ಈ ರೀತಿ ಮಾಡಲು ಹೋಗಬೇಡಿ. ಮೊದಲು ನಿಮ್ಮ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದರು.

ಹೀಗಾಗಿ ಈ ವರ್ಷ ಹುಟ್ಟುಹಬ್ಬ ಆಚರಣೆಗೆ ವಾರಕ್ಕೆ ಮುಂಚೆಯೇ ಯಾರೂ ಬ್ಯಾನರ್, ಕಟೌಟ್ ಕಟ್ಟಲು ಹೋಗಬೇಡಿ. ನೀವು ಎಲ್ಲಿದ್ದೀರೊ ಅಲ್ಲಿಂದ ಶುಭ ಹಾರೈಸಿ. ನಿಮ್ಮ ಕುಟುಂಬದವರು ಹೆಮ್ಮೆಪಡುವಂತಹ ಕೆಲಸ ಮಾಡಿ. ಅದುವೇ ನನಗೆ ಆಶೀರ್ವಾದ ಎಂದು ಮೊದಲೇ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments