Webdunia - Bharat's app for daily news and videos

Install App

ಮತ್ತೊಂದು ಬಾಲಿವುಡ್ ಚಿತ್ರ ಒಪ್ಪಿಕೊಂಡಿದ್ದಾರಂತೆ ರಾಕಿಂಗ್ ಸ್ಟಾರ್ ಯಶ್

Krishnaveni K
ಸೋಮವಾರ, 22 ಏಪ್ರಿಲ್ 2024 (10:56 IST)
ಬೆಂಗಳೂರು: ಕೆಜಿಎಫ್ ಬಳಿಕ ಬಾಲಿವುಡ್ ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡ ರಾಕಿಂಗ್ ಸ್ಟಾರ್ ಯಶ್ ಆಗಾಗ ಹಿಂದಿ ಸಿನಿಮಾ ಒಪ್ಪಿಕೊಂಡ ಬಗ್ಗೆ ರೂಮರ್ ಗಳು ಕೇಳಿಬರುತ್ತಲೇ ಇರುತ್ತವೆ. ಇದೀಗ ಮತ್ತೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡ ಸುದ್ದಿ ಕೇಳಿಬರುತ್ತಿದೆ.

ಯಶ್ ಈ ಮೊದಲು ರಣಬೀರ್ ಕಪೂರ್ ನಾಯಕರಾಗಿರುವ ಹಿಂದಿಯ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯಿತ್ತು. ಬಳಿಕ ಯಶ್ ಈ ಸಿನಿಮಾಗೆ ಸಹ ನಿರ್ಮಾಣ ಮಾಡಲಿರುವುದು ಪಕ್ಕಾ ಆಗಿದೆ. ಆದರೆ ಇನ್ನೂ ರಾವಣನ ಪಾತ್ರ ಮಾಡುತ್ತಾರೆಯೇ ಎಂಬುದು ಕನ್ ಫರ್ಮ್ ಮಾಡಿಲ್ಲ.

ಈ ನಡುವೆ ಯಶ್ ಮತ್ತೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಬರುತ್ತಿದೆ. 1993 ರಲ್ಲಿ ರಿಲೀಸ್ ಆಗಿದ್ದ ಸಂಜಯ್ ದತ್, ಜಾಕಿ ಶ್ರಾಫ್, ಮಾಧುರಿ ದೀಕ್ಷಿತ್ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಖಳನಾಯಕ್ ಸಿನಿಮಾ ಸೂಪರ್ ಹಿಟ್ ಆಗಿತ್ತು.

ಇದೀಗ ಅದೇ ಸಿನಿಮಾದ ಸೀಕ್ವೆಲ್ ಬರುತ್ತಿದೆ. ಈ ಸಿನಿಮಾದಲ್ಲಿ ಬಲ್ಲು ಬಲರಾಮ್ ಪಾತ್ರವನ್ನು ನಿರ್ವಹಿಸಲು ಚಿತ್ರತಂಡ ಯಶ್  ರನ್ನು ಸಂಪರ್ಕಿಸುತ್ತಿದೆ ಎಂಬ ಮಾತಿದೆ. ಯಶ್ ಅಥವಾ ಅಲ್ಲು ಅರ್ಜುನ್ ಅವರಂತಹ ಖಡಕ್ ನಟರನ್ನು ಕರೆತರಲು ಚಿತ್ರತಂಡ ಪ್ರಯತ್ನಿಸುತ್ತಿದೆ. ಇದಕ್ಕೆ ಯಶ್ ಒಪ್ಪಿಗೆ ನೀಡುತ್ತಾರಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments