Webdunia - Bharat's app for daily news and videos

Install App

ದರ್ಶನ್ ಗೆ ಶಿಕ್ಷೆಯಾಗುವ ಬಗ್ಗೆ ಮುಲಾಜಿಲ್ಲದೇ ಹೇಳಿಕೆ ನೀಡಿದ ರಾಕ್ ಲೈನ್ ವೆಂಕಟೇಶ್

Krishnaveni K
ಸೋಮವಾರ, 12 ಆಗಸ್ಟ್ 2024 (13:56 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಬಗ್ಗೆ ಅವರ ಆಪ್ತವಲಯದಲ್ಲಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ.

ನಾಳೆ ಮತ್ತು ನಾಡಿದ್ದು ಕಲಾವಿದರ ಸಂಘದಲ್ಲಿ ಕನ್ನಡ ಚಿತ್ರರಂಗದ ವತಿಯಿಂದ ಪೂಜೆ, ಹವನ ನಡೆಯುತ್ತಿದೆ. ಇದರ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ರಾಕ್ ಲೈನ್ ವೆಂಕಟೇಶ್ ಮಾತನಾಡುವಾಗ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಕಲಾವಿದರ ಸಂಘದಲ್ಲಿ ನಡೆಯುತ್ತಿರುವ ಪೂಜೆ ದರ್ಶನ್ ಗಾಗಿ ಎಂಬ ಮಾತು ಕೇಳಿಬಂದಿತ್ತು.

ಇದಕ್ಕೆ ಸ್ಪಷ್ಟನೆ ನೀಡಿರುವ ರಾಕ್ ಲೈನ್ ವೆಂಕಟೇಶ್, ಇದು ದರ್ಶನ್ ಬಿಡುಗಡೆಗಾಗಿ ನಡೆಯುತ್ತಿರುವ ಪೂಜೆ ಅಲ್ಲ. ಕಳೆದ ಎರಡು ಮೂರು ತಿಂಗಳಿನಿಂದ ಕನ್ನಡ ಚಿತ್ರ ಸೋತಿದೆ, ಹಲವು ಹಿರಿಯರು ತೀರಿಕೊಂಡಿದ್ದಾರೆ. ಈ ಕಾರಣಕ್ಕೆ ಪೂಜೆ ಮಾಡೋಣವೆಂದು ನಟ ದೊಡ್ಡಣ್ಣ ಸಲಹೆ ನೀಡಿದ್ದರು. ಅದರಂತೆ ಪೂಜೆ ಮಾಡುತ್ತಿದ್ದೇವೆ. ದರ್ಶನ್ ಗಾಗಿ ಪೂಜೆ ಮಾಡುತ್ತಿದ್ದರೆ ಮನೆಯಲ್ಲಿಟ್ಟುಕೊಳ್ಳುತ್ತಿದ್ದೆ ಎಂದಿದ್ದಾರೆ.

ಅಷ್ಟೇ ಅಲ್ಲ, ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿರುವ ಅವರು ಒಂದು ವೇಳೆ ದರ್ಶನ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಚಿತ್ರರಂಗದ ಕುಟುಂಬದವರಿಂದ ಒಬ್ಬರ ಬಂಧನವಾಗಿದೆ. ಅದಕ್ಕಾಗಿ ಪೂಜೆ ಮಾಡಿಸುತ್ತಿದ್ದೇವೆ ಎಂದರೆ  ಆ ರೀತಿ ಅಲ್ಲ’ ಎಂದು ರಾಕ್ ಲೈನ್ ಮುಲಾಜಿಲ್ಲದೇ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments