Webdunia - Bharat's app for daily news and videos

Install App

ಮಂಡ್ಯ ಜನರಿಗಾಗಿ ಒಂದು ತೀರ್ಮಾನಕ್ಕೆ ಬಂದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್!

Webdunia
ಸೋಮವಾರ, 10 ಜೂನ್ 2019 (10:10 IST)
ಬೆಂಗಳೂರು: ಈ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಸುಮಲತಾ ಅಂಬರೀಶ್ ಗೆಲುವಿನಲ್ಲಿ ಯಶ್, ದರ್ಶನ್‍ ‍ಜತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೂಡಾ ಅಷ್ಟೇ ಶ್ರಮವಹಿಸಿದ್ದರು.


ಸುಮಲತಾ ಏನೇ ಮಾಡಿದರೂ ಅವರ ಜತೆಗೆ ರಾಕ್ ಲೈನ್ ಅಣ್ಣನಂತೆ ಬೆಂಗಾವಲಾಗಿ ಇದ್ದೇ ಇರುತ್ತಾರೆ. ಚುನಾವಣೆ ಪ್ರಚಾರದಿಂದ ಹಿಡಿದು ಮತ ಎಣಿಕೆ ದಿನವೂ ರಾಕ್ ಲೈನ್ ವೆಂಕಟೇಶ್ ಜತೆಗೇ ಇದ್ದರು. ಈಗಲೂ ಸುಮಲತಾ ಕುಟುಂಬ ಸದಸ್ಯರಂತೇ ಇರುವ ರಾಕ್ ಲೈನ್ ಮಂಡ್ಯ ಜನರ ಪ್ರೀತಿಯ ಋಣ ತೀರಿಸಲು ಮಹತ್ವದ ನಿರ್ಧಾರವೊಂದನ್ನು ಮಾಡಿದ್ದಾರೆ.

ಈ ವಿಚಾರವನ್ನು ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಬಹಿರಂಗಪಡಿಸಿದ್ದಾರೆ. ಇನ್ನು ಮುಂದೆ ರಾಕ್ ಲೈನ್ ನಿರ್ಮಾಣ ಮಾಡುವ ಎಲ್ಲಾ ಸಿನಿಮಾಗಳ ಪೋಸ್ಟರ್, ಟೈಟಲ್ ಕಾರ್ಡ್ ಗಳಲ್ಲಿ ‘ಮಂಡ್ಯ ಜಿಲ್ಲೆಯ ಸ್ವಾಭಿಮಾನ ಮತ್ತು ಜನರ ಆಶೀರ್ವಾದ’ ಎಂದು ಹಾಕಿಸುತ್ತಾರಂತೆ. ಆ ಮೂಲಕ ಮಂಡ್ಯ ಜನರ ಪ್ರೀತಿಯ ಋಣ ತೀರಿಸಲು ಮುಂದಾಗುವುದಾಗಿ ರಾಕ್ ಲೈನ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments