ನಟ ದರ್ಶನ್ ಗೆ ಇಷ್ಟದ ಊಟ ನೀಡಲು ಕ್ಯೂ ನಿಂತಿದ್ದಾರಾ ರೌಡಿಗಳು

Krishnaveni K
ಶನಿವಾರ, 3 ಆಗಸ್ಟ್ 2024 (11:58 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಗೆ ಈಗ ಊಟ ಕೊಡಲು ಜೈಲಿನಲ್ಲಿರುವ ಕುಖ್ಯಾತ ರೌಡಿಗಳು ಸಹಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಮಾಂಸಾಹಾರ ಪ್ರಿಯ. ಒಂದು ದಿನವೂ ಮಾಂಸಾಹಾರವಿಲ್ಲದೇ ಊಟ ಮಾಡಿದವರಲ್ಲ. ಆದರೆ ಈಗ ಜೈಲಿನಲ್ಲಿ ಇತರೆ ಕೈದಿಗಳಿಗೆ ನೀಡುವ ಸಪ್ಪೆ ಆಹಾರವನ್ನೇ ಅವರಿಗೂ ನೀಡಲಾಗುತ್ತಿದೆ. ವಾರಕ್ಕೊಂದು ಬಾರಿ ಮಾತ್ರ ಜೈಲಿನ ಮೆನುವಿನಂತೆ ಮಾಂಸಾಹಾರ ನೀಡಲಾಗುತ್ತಿದೆ.

ಆದರೆ ದರ್ಶನ್ ಸೇವೆ ಮಾಡಲು ಜೈಲಿನಲ್ಲಿರುವ ಕುಖ್ಯಾತ ರೌಡಿಗಳು ಸಾಲುಗಟ್ಟಿ ನಿಂತಿದ್ದಾರಂತೆ. ಅವರಿಗೆ ವಿಸಿಟರ್ ಗಳು ನೀಡುವ ಮಾಂಸಾಹಾರವನ್ನು ದರ್ಶನ್ ಗೆ ತಲುಪಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಮಾಂಸಾಹಾರಕ್ಕಾಗಿ ಪರಿತಪಿಸುತ್ತಿರುವ ದರ್ಶನ್ ಗೆ ಜೈಲಿನಲ್ಲಿರುವ ರೌಡಿಗಳೇ ಸಹಾಯ ಮಾಡುತ್ತಿದ್ದಾರಂತೆ.

ಸದ್ಯಕ್ಕೆ ದರ್ಶನ್ ವಿಐಪಿ ಸೆಲ್ ನಲ್ಲಿ ಏಕಾಂಗಿಯಾಗಿದ್ದಾರೆ. ಅವರ ಸೆಲ್ ಪಕ್ಕದಲ್ಲಿ ಕೆಲವು ಸಿಬ್ಬಂದಿಗಳನ್ನೂ ನಿಯೋಜಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದರೂ ಕೋರ್ಟ್ ನಿಂದ ದರ್ಶನ್ ಗೆ ಅನುಮತಿ ಸಿಕ್ಕಿಲ್ಲ. ಇದರ ನಡುವೆ ಆಗಸ್ಟ 14 ರವರೆಗೂ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments