ಸಾಹಸಸಿಂಹ ವಿಷ್ಣುವರ್ಧನ್ ಕಲಿತ ಶಾಲೆಯ ಸ್ಥಿತಿಗೆ ಮರುಗಿದ ಚಿತ್ರರಂಗ

Webdunia
ಬುಧವಾರ, 31 ಮಾರ್ಚ್ 2021 (10:20 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಓದಿದ ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ ಈಗ ಮುಚ್ಚುವ ಹಂತಕ್ಕೆ ಬಂದಿದೆ. ಇದರ ಬಗ್ಗೆ ಸ್ಯಾಂಡಲ್ ವುಡ್ ಕಲಾವಿದರು ಬೇಸರ ವ್ಯಕ್ತಪಡಿಸಿದ್ದಾರೆ.


ವಿಷ್ಣು ದಾದ ಕಲಿತ ಚಾಮರಾಜಪೇಟೆಯ ಸರ್ಕಾರಿ ಶಾಲೆಗೆ 150 ವರ್ಷ ತುಂಬುತ್ತಿದೆ. ಆದರೆ ಈ ವೇಳೆ ಈ ಸಂಭ್ರಮಾಚರಿಸುವ ಬದಲು ಶಾಲೆಯನ್ನೇ ಮುಚ್ಚಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ನಟ ರಿಷಬ್ ಶೆಟ್ಟಿ, ನಟಿ ಪ್ರಣೀತಾ ಸೇರಿದಂತೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಖೇದ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈ ಶಾಲೆಯನ್ನು ಮುಚ್ಚುವ ಬದಲು ಸಹಾಯ ಮಾಡಬೇಕು. ನಮ್ಮ ಪ್ರಣೀತಾ ಫೌಂಡೇಶನ್ ಕಡೆಯಿಂದಲೂ ಶಾಲೆಗೆ ಅಗತ್ಯ ಸಹಾಯ ಮಾಡುವುದಾಗಿ ಪ್ರಣೀತಾ ಹೇಳಿದ್ದಾರೆ. ಸೆಲೆಬ್ರಿಟಿಗಳ ಈ ಟ್ವೀಟ್ ಗೆ ಅಭಿಮಾನಿಗಳೂ ಸ್ಪಂದಿಸುತ್ತಿದ್ದಾರೆ. ಈ ಮೂಲಕ ಶಾಲೆ ಉಳಿಸಲು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನೇ ಕೈಗೊಳ್ಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments