Webdunia - Bharat's app for daily news and videos

Install App

ಕೊನೆಗೂ ವಿಚ್ಛೇದನ ಸುದ್ದಿ ಪ್ರಕಟಿಸಿದ ಸಮಂತಾ-ನಾಗಚೈತನ್ಯ

Webdunia
ಶನಿವಾರ, 2 ಅಕ್ಟೋಬರ್ 2021 (16:50 IST)
ಹೈದರಾಬಾದ್: ಟಾಲಿವುಡ್ ಕಪಲ್ ನಾಗಚೈತನ್ಯ-ಸಮಂತಾ ಋತು ಪ್ರಭು ಕೊನೆಗೂ ತಮ್ಮ ವೈವಾಹಿಕ ಜೀವನದ ಕುರಿತಾಗಿ ಹಬ್ಬಿದ್ದ ಸುದ್ದಿಗೆ ತೆರೆ ಎಳೆದಿದ್ದಾರೆ. ಇಬ್ಬರೂ ವಿಚ್ಛೇದನ ವಿಚಾರವನ್ನು ಅಧಿಕೃತವಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

 

‘ನಮ್ಮೆಲ್ಲಾ ಹಿತೈಷಿಗಳಿಗೆ, ಸಾಕಷ್ಟು ಯೋಚನೆ ಮಾಡಿ ನಾನು ಮತ್ತು ಚೈ ನಮ್ಮ ಪತಿ-ಪತ್ನಿ ಸಂಬಂಧಕ್ಕೆ ತೆರೆ ಎಳೆಯುವ ನಿರ್ಧಾರ ಮಾಡಿದ್ದೇವೆ. ನಮ್ಮ ನಡುವೆ ದಶಕಗಳಿಗೂ ಹೆಚ್ಚು ಸಮಯದ ಸ್ನೇಹವಿತ್ತು. ಅದು ಮುಂದೆಯೂ ಇರಲಿದೆ ಎಂದು ನಂಬಿದ್ದೇವೆ.  ಈ ಕಠಿಣ ಸಂದರ್ಭದಲ್ಲಿ ಮಾಧ‍್ಯಮಗಳು, ಅಭಿಮಾನಿಗಳು, ಹಿತೈಷಿಗಳು ನಮ್ಮ ವೈಯಕ್ತಿಕ ಜೀವನಕ್ಕೆ ಬೆಲೆ ಕೊಟ್ಟು ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇವೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ. ಇದೇ ಪೋಸ್ಟ್ ನ್ನು ನಾಗಚೈತನ್ಯ ಕೂಡಾ ಪ್ರಕಟಿಸಿದ್ದಾರೆ. ಅಲ್ಲಿಗೆ ಟಾಲಿವುಡ್ ನ ಈ ಸುಂದರ ಜೋಡಿಯ ವೈವಾಹಿಕ ಜೀವನ ಅಧಿಕೃತವಾಗಿ ಮುರಿದುಬಿದ್ದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments