Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಸ್ಟಾರ್ ವಾರ್ ಗ್ಯಾರಂಟಿ!

Webdunia
ಶುಕ್ರವಾರ, 29 ಮೇ 2020 (08:47 IST)
ಬೆಂಗಳೂರು: ರಾಜ್ಯ ಸರ್ಕಾರ ಥಿಯೇಟರ್ ತೆರೆಯಲು ಅನುಮತಿ ನೀಡುವುದನ್ನೇ ಚಿತ್ರರಂಗ ಕಾಯುತ್ತಿದೆ. ಈ ಬಗ್ಗೆ ಈಗ ರಾಜ್ಯ  ಸರ್ಕಾರವೂ ಒಲವು ತೋರಿರುವುದು ಸಿನಿಮಾ ರಸಿಕರಿಗೆ ಸಿಹಿ ಸುದ್ದಿ ಸಿಗುವ ಲಕ್ಷಣವಿದೆ.


ಆದರೆ ಥಿಯೇಟರ್ ತೆರೆಯಲು ಅನುಮತಿ ನೀಡುವುದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಶುರುವಾಗುವುದು ಗ್ಯಾರಂಟಿಯಾಗಿದೆ. ಯಾಕೆಂದರೆ ಸ್ಯಾಂಡಲ್ ವುಡ್ ನ ಎಲ್ಲಾ ಘಟಾನುಘಟಿ ನಾಯಕರ ಸಿನಿಮಾಗಳು ಈಗ ಬಿಡುಗಡೆಗೆ ಕಾದು ಕುಳಿತಿವೆ.

ಪುನೀತ್ ರಾಜ್ ಕುಮಾರ್ ಅವರ ‘ಯುವರತ್ನ’, ದರ್ಶನ್ ಅವರ ‘ರಾಬರ್ಟ್’, ಕಿಚ್ಚ ಸುದೀಪ್ ಅವರ ‘ಕೋಟಿಗೊಬ್ಬ 3’ ಈಗ ಬಿಡುಗಡೆ ಕಾದಿರುವ ಬಿಸಿ ಬಿಸಿ ಸಿನಿಮಾಗಳು. ಆಗಾಗ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಪರವಾಗಿ ಕಿತ್ತಾಟ ನಡೆಸುತ್ತಿರುತ್ತಾರೆ.

ಥಿಯೇಟರ್ ಓಪನ್ ಆದ ಕೂಡಲೇ ಈಗ ಈ ಸ್ಟಾರ್ ನಟರ ನಿರ್ಮಾಪಕರಿಗೂ ಒಬ್ಬರಿಗೊಬ್ಬರು ಕ್ಲ್ಯಾಶ್ ಆಗದಂತೆ ಸಿನಿಮಾ ಬಿಡುಗಡೆ ಮಾಡುವ ತಲೆನೋವು ಶುರುವಾಗಲಿದೆ. ಜತೆಗೆ ತಮ್ಮ ನೆಚ್ಚಿನ ನಟನ ಸಿನಿಮಾವೇ ದಾಖಲೆ ಮಾಡಿರುವುದು ಎಂದು ಆಯಾ ಸ್ಟಾರ್ ನಟರ ಅಭಿಮಾನಿಗಳು ಕೆಸರೆರಚಾಟ ಮಾಡುವುದಂತೂ ಗ್ಯಾರಂಟಿಯಾಗಿದೆ. ಇದರ ನಡುವೆ ಹೊಸಬರ ಸಿನಿಮಾಗಳನ್ನು ಕೇಳುವವರು ಯಾರೋ?

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments