Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಒಬ್ಬೊಬ್ಬರೇ ನಟಿಯರಿಂದ ಹೇಳಿಕೆ ಶುರು

Krishnaveni K
ಗುರುವಾರ, 5 ಸೆಪ್ಟಂಬರ್ 2024 (10:43 IST)
Photo Credit: Facebook
ಬೆಂಗಳೂರು: ಮಲಯಾಳಂ ಸಿನಿಮಾ ರಂಗದಲ್ಲಿ ಹೇಮಾ ಸಮಿತಿ ವರದಿಯಂತೆ ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳದ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ಸಮಿತಿ ರಚಿಸುವಂತೆ ಫೈರ್ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಡಿದ ಮನವಿ ಬಗ್ಗೆ ಈಗ ಒಬ್ಬೊಬ್ಬರೇ ನಟಿಮಣಿಯರು ಪ್ರತಿಕ್ರಿಯಿಸಲು ಶುರು ಮಾಡಿದ್ದಾರೆ.

ಚೇತನ್ ಅಹಿಂಸಾ ನೇತೃತ್ವದಲ್ಲಿ ಕಿಚ್ಚ ಸುದೀಪ್, ಶ್ರುತಿ ಹರಿಹರನ್, ರಮ್ಯಾ ಸೇರಿದಂತೆ ಹಲವು ತಾರೆಯರು ಸಹಿ ಹಾಕಿದ ಮನವಿ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೀಡಲಾಗಿದೆ. ಸ್ಯಾಂಡಲ್ ವುಡ್ ನಲ್ಲೂ ಕಾಸ್ಟಿಂಗ್ ಕೌಚ್ ನಡೆಯುತ್ತಿರುವ ಬಗ್ಗೆ ಸಮಿತಿ ರಚಿಸಿ ತನಿಖೆ ನಡೆಸಿ ಎಂದು ಮನವಿ ಮಾಡಲಾಗಿದೆ.

ಇದರ ಬೆನ್ನಲ್ಲೇ ಈಗ ಕೆಲವು ನಟಿಯರು ಬಹಿರಂಗವಾಗಿ ಇದಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಟಿ ನೀತೂ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಕಮಿಟಿ ವರದಿ ಕ್ರಾಂತಿ ಎಬ್ಬಿಸಿದೆ. ಕನ್ನಡದಲ್ಲೂ ಇಂತಹದ್ದೊಂದು ತನಿಖೆ ನಡೆಯಬೇಕು ಎಂದಿದ್ದಾರೆ.

ಇನ್ನು, ನಟಿ ಹಿತಾ ಚಂದ್ರಶೇಖರ್ ನಾವು ಕೆಲಸ ಮಾಡುವ ಸ್ಥಳ ಆತಂಕ ಮುಕ್ತವಾಗಬೇಕು ಎಂದಿದ್ದಾರೆ. ಇನ್ನೊಬ್ಬ ಸ್ಯಾಂಡಲ್ ವುಡ್ ನಟಿ ಮಾನ್ವಿತಾ ಕಾಮತ್ ಕೂಡಾ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು ಚಿತ್ರರಂಗದಲ್ಲಿ ಮಹಿಳೆಯರೂ ಗೌರವದಿಂದ ಬದುಕುವಂತಾಗಬೇಕು ಎಂದಿದ್ದಾರೆ. ಅಲ್ಲದೆ, ನಟಿ ಸಂಗೀತಾ ಭಟ್, ಸಂಜನಾ ಗಲ್ರಾನಿ ಸೇರಿದಂತೆ ಅನೇಕರು ಈಗ ಈ ವಿಚಾರವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ಮುಂದಿನ ಸುದ್ದಿ