Webdunia - Bharat's app for daily news and videos

Install App

ಸಂಕಷ್ಟದಲ್ಲಿ ಒಗ್ಗಟ್ಟಾದ ಸ್ಯಾಂಡಲ್ ವುಡ್ ತಾರೆಯರು

Webdunia
ಭಾನುವಾರ, 13 ಜೂನ್ 2021 (09:04 IST)
ಬೆಂಗಳೂರು: ಸಿನಿಮಾ ವಿಚಾರದಲ್ಲಿ ಎಷ್ಟೇ ಪೈಪೋಟಿಯಿರಲಿ, ಆದರೆ ಕೊರೋನಾದಿಂದಾಗಿ ಜನರು ಸಂಕಷ್ಟದಲ್ಲಿದ್ದಾಗ ಸ್ಯಾಂಡಲ್ ವುಡ್ ತಾರೆಯರು ಪರಸ್ಪರ ಒಗ್ಗಟ್ಟಾಗಿ ಕೈ ಜೋಡಿಸಿದ್ದು ಶ್ಲಾಘನೀಯ.


ಲಾಕ್ ಡೌನ್ ಘೋಷಣೆಯಾದಾಗ ಎಷ್ಟೋ ಜನ ಹೊಟ್ಟೆಗೆ ಹಿಟ್ಟಿಲ್ಲದೇ ಸಂಕಷ್ಟಕ್ಕೀಡಾದರು. ಇಷ್ಟು ದಿನ ತಮ್ಮನ್ನು ಮೆರೆಸುತ್ತಿದ್ದ ಅಭಿಮಾನಿಗಳು ಸಂಕಷ್ಟದಲ್ಲಿದ್ದಾರೆಂದು ಅರಿವಾದಾಗ ನಟ-ನಟಿಯರು ಆಹಾರ, ರೇಷನ್ ಕಿಟ್ ವಿತರಿಸಲು ಮುಂದಾದರು.

ರಿಯಲ್ ಸ್ಟಾರ್ ಉಪೇಂದ್ರ ಕಿಟ್ ನೀಡಲು ಮುಂದಾದಾಗ ಸಾಕಷ್ಟು ಸೆಲೆಬ್ರಿಟಿಗಳು ಅವರಿಗೆ ಆರ್ಥಿಕವಾಗಿ ನೆರವು ನೀಡಿದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿಗಳಿಗೆ ನೆರವಾಗಿ ಎಂದು ಕರೆ ನೀಡಿದ್ದಕ್ಕೆ ಸಾಕಷ್ಟು ಕಲಾವಿದರು ಪ್ರಾಣಿಗಳ ದತ್ತು ತೆಗೆದುಕೊಳ್ಳುವ ಅಭಿಯಾನಕ್ಕೆ ಕೈ ಜೋಡಿಸಿದರು. ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಮಂದಿಗೆ ಸ್ವಂತ ಖಾತೆಯಿಂದ ತಲಾ 5 ಸಾವಿರ ರೂ. ನೀಡಿ ಹೃದಯವಂತಿಕೆ ಮೆರೆದರು. ಕಿಚ್ಚ ಸುದೀಪ್ ಆಹಾರ ಕಿಟ್ ಗಳನ್ನು ವಿತರಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕಾರ್ಮಿಕರ ನೆರವಿಗೆ ಧನ ಸಹಾಯ ಮಾಡಿದರು. ತಮ್ಮನ್ನು ಸದಾ ಮೆರೆಸುವ ಅಭಿಮಾನಿಗಳಿಗೆ ನೆರವಾಗಲು ಕಲಾವಿದರು ಒಟ್ಟಾಗಿದ್ದು ನಿಜಕ್ಕೂ ಶ್ಲಾಘನೀಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments