Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾಗಳಲ್ಲಿ ವಿಷ್ಣುವರ್ಧನ್ ನೆನಪು

Webdunia
ಶುಕ್ರವಾರ, 18 ಸೆಪ್ಟಂಬರ್ 2020 (11:15 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ 70 ನೇ ಜನ್ಮದಿನೋತ್ಸವದ ಅಂಗವಾಗಿ ಸ್ಯಾಂಡಲ್ ವುಡ್ ಕಲಾವಿದರು ತಮ್ಮ ಸೋಷಿಯಲ್ ಮೀಡಿಯಾ ಪುಟಗಳಲ್ಲಿ ‘ದಾದ’ನ ಸ್ಮರಣೆ ಮಾಡಿದ್ದಾರೆ.


ವಿಷ್ಣುವರ್ಧನ್ ಪರಮಾಪ್ತ ಮಿತ್ರ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ, ನಟಿ,ಸಂಸದೆ ಸುಮಲತಾ ಅಂಬರೀಶ್, ವಿಷ್ಣು ಎಂದರೆ ಸ್ನೇಹ, ಅವರೊಂದಿಗೆ ಕಳೆದ ಪ್ರತಿಯೊಂದು ಕ್ಷಣ ಸಂತೋಷದ ಅವಿಸ್ಮರಣೀಯ ಅನುಭವ. ಅಂಬಿಗೆ ವಿಷ್ಣು ಪ್ರಾಣವೇ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ. ಅಭಿಷೇಕ್ ಅಂಬರೀಶ್ ಕೂಡಾ ಶುಭಾಷಯ ಕೋರಿದ್ದಾರೆ.

ಕಿಚ್ಚ ಸುದೀಪ್ ನಿನ್ನೆಯೇ ವಿಷ್ಣುವರ್ಧನ್ ಬರ್ತ್ ಡೇ ಸಿಡಿಪಿ ಬಿಡುಗಡೆ ಮಾಡಿ ಭಾವುಕ ಸಂದೇಶ ಬರೆದಿದ್ದರು. ಇವರಲ್ಲದೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಶಿವರಾಜ್ ಕುಮಾರ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಮೇಶ್ ಅರವಿಂದ್, ಗೋಲ್ಡನ್ ಸ್ಟಾರ್ ಗಣೇಶ್, ರಕ್ಷಿತಾ ಪ್ರೇಮ್, ಆಂಕರ್ ಅನುಶ್ರೀ ಮುಂತಾದವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ವಿಷ್ಣುವರ್ಧನ್ ಜತೆಗಿನ ವಿಶೇಷ ನೆನಪುಗಳನ್ನು ಮೆಲುಕು ಹಾಕಿ ಶುಭಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments