Select Your Language

Notifications

webdunia
webdunia
webdunia
webdunia

ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಸಂಜನಾ ಆರೋಪ ವಿಚಾರ; ನಿರ್ದೇಶಕರ ಸಂಘದಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ

ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಸಂಜನಾ ಆರೋಪ ವಿಚಾರ; ನಿರ್ದೇಶಕರ ಸಂಘದಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ
ಬೆಂಗಳೂರು , ಶನಿವಾರ, 27 ಅಕ್ಟೋಬರ್ 2018 (12:19 IST)
ಬೆಂಗಳೂರು : ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ನಟಿ ಸಂಜನಾ ಆರೋಪ ವಿಚಾರಕ್ಕೆ  ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ನಿರ್ದೇಶಕರ ಸಂಘದಲ್ಲಿ ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಗಂಡ ಹೆಂಡತಿ ಸಿನಿಮಾದ ಚಿತ್ರಿಕರಣದ ವೇಳೆ ನಿರ್ದೇಶಕ ರವಿ ಶ್ರೀವತ್ಸ ತನ್ನನ್ನು ಹೀನಾಯವಾಗಿ ಬಳಸಿಕೊಂಡಿದ್ದಾರೆ ಎಂದು ಚಿತ್ರದ ನಟಿ ಸಂಜನಾ ಆರೋಪ ಮಾಡಿದ ಹಿನ್ನಲೆಯಲ್ಲಿ ಬುಧವಾರ ಸುದ್ಧಿಗೋಷ್ಠಿ ನಡೆಸಿದ ಗಂಡ ಹೆಂಡತಿ ಚಿತ್ರತಂಡ ನಿರ್ದೇಶಕ ರವಿ ಶ್ರೀವತ್ಸ ಅವರ ಬಳಿ ಕ್ಷಮೆ ಕೇಳುವಂತೆ ನಟ ಸಂಜನಾಗೆ ಶುಕ್ರವಾರದ ತನಕ ಗಡುವು ನೀಡಿತ್ತು.

 

ಆದರೆ ನಿರ್ದೇಶಕ ರವಿ ಶ್ರೀವತ್ಸ ಅವರ ಬಳಿ ಸಂಜನಾ ಕ್ಷಮೆ ಕೇಳದ ಕಾರಣ ಈ ಬಗ್ಗೆ ನಿರ್ದೇಶಕರ ಸಂಘದಲ್ಲಿ ಸಂಜೆ 4 ಗಂಟೆಗೆ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಮೀ ಟೂ ಬಗ್ಗೆ ಹರ್ಷಿಕಾ ಪೂಣಚ್ಚ ಮತ್ತೊಂದು ಸ್ಪೋಟಕ ಟ್ವೀಟ್!