Webdunia - Bharat's app for daily news and videos

Install App

ಅಭಿಷೇಕ್​ಗೆ ಕಾಂತಾರದ ಸಪ್ತಮಿ ಗೌಡ ನಾಯಕಿ

Webdunia
ಮಂಗಳವಾರ, 29 ನವೆಂಬರ್ 2022 (19:28 IST)
ದಿವಂಗತ ಅಂಬರೀಶ್ ಅವರ ಸುಪುತ್ರ ಅಭಿಷೇಕ್ ಅಂಬರೀಶ್ ಅಮರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋದು ಗೊತ್ತಿರುವ ವಿಚಾರ. ಇನ್ನು, ಅಭಿಷೇಕ್ ನಟನೆಯ ಎರಡನೇ ಸಿನಿಮಾ ಬ್ಯಾಡ್ ಮ್ಯಾನ್ಸರ್ಸ್ ಚಿತ್ರ ಬಿಡುಗಡೆ ಆಗಿಲ್ಲ. ಇದೀಗ ಅಭಿಷೇಕ್​ ಅಂಬರೀಶ್​ ನಟಿಸುತ್ತಿರೋ ಕಾಳಿ ಚಿತ್ರ ಸೈಲೆಂಟ್ ಆಗಿ ಸೆಟ್ಟೇರಿದೆ. ಹೌದು ಪೈಲ್ವಾನ್ ಸಿನಿಮಾ ನಿರ್ದೇಶಕ ಎಸ್​. ಕೃಷ್ಣ ನಿರ್ದೇಶಿಸುತ್ತಿರುವ ಕಾಳಿ ಚಿತ್ರದ ಮುಹೂರ್ತ ಬೆಂಗಳೂರಿನ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ. ಅಭಿಷೇಕ್ ಅಂಬರೀಶ್​ಗೆ ಕಾಂತಾರ ಸಿನಿಮಾದ ನಾಯಕಿ ಸಪ್ತಮಿ ಗೌಡ ಜೋಡಿಯಾಗುತ್ತಿದ್ದಾರೆ‌. ಈ ಹಿಂದೆ ಕೃಷ್ಣ ನಿರ್ದೇಶನದ ‘ಹೆಬ್ಬುಲಿ’ ಮತ್ತು ‘ಪೈಲ್ವಾನ್’ ಚಿತ್ರಗಳಿಗೆ ಛಾಯಾಗ್ರಾಹಕರಾಗಿದ್ದ ಕರುಣಾಕರ್​, ಇಲ್ಲೂ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಟಗರು’ ‘ಸಲಗ’ ಮುಂತಾದ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು. ದೀಪು ಎಸ್ ಕುಮಾರ್ ಸಂಕಲನ ಮತ್ತು ‘ಕೆಜಿಎಫ್’ ಖ್ಯಾತಿಯ ಚಂದ್ರಮೌಳಿ ಈ ಚಿತ್ರಕ್ಕೆ ಸಂಭಾಷಣೆ ‘ಕಾಳಿ’ ಕಾಲಿಗೆ ಸಂಭಾಷಣೆ ಬರೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments