ಬುಕ್ ಮೈ ಶೋ ಹಾಗೂ ಹೈದರಾಬಾದ್‌ ಮಲ್ಟಿಪ್ಲೆಕ್ಸ್‌ ಮೇಲೆ ಕಿಡಿಕಾರಿದ ನಟ ಸತೀಶ್. ಕಾರಣವೇನು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (08:54 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ನೀನಾಸಂ ಸತೀಶ್ ನಟಿಸಿದ ‘ಅಯೋಗ್ಯ' ಚಿತ್ರ ಪ್ರದರ್ಶನಕ್ಕೆ  ಹೈದರಾಬಾದ್‌ನ ಮಲ್ಟಿಪ್ಲೆಕ್ಸ್‌ನಲ್ಲಿಅವಕಾಶ ಸಿಗದ ಹಿನ್ನಲೆಯಲ್ಲಿ ಭಾನುವಾರ ಫೇಸ್‌ಬುಕ್‌ ಲೈವ್ ಬಂದ ನಟ ಸತೀಶ್ ಬುಕ್ ಮೈ ಶೋ ಸೇರಿದಂತೆ ಮಲ್ಟಿಫ್ಲೆಕ್ಸ್ ಹಾಗೂ ಹೈದರಾಬಾದ್ ಫಿಲಂ ಚೆಂಬರ್‌ ವಿರುದ್ಧ ಕಿಡಿಕಾರಿದ್ದಾರೆ.


ಗ್ರಾಮೀಣ ಶೈಲಿಯಲ್ಲಿ ಮೂಡಿಬಂದ ‘ಅಯೋಗ್ಯ' ಚಿತ್ರವು ಇದೇ ತಿಂಗಳ 17 ರಂದು ಕರ್ನಾಟಕದಲ್ಲಿ ಸುಮಾರು 150 ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಕೂಡ ದೊಕಿದ್ದು, ಇದೀಗ ಚಿತ್ರ 10 ಕೋಟಿ ರೂಪಾಯಿ ಸಂಗ್ರಹ ಮಾಡಿದೆ.


ಆದರೆ 'ಹೈದರಾಬಾದ್‌ ಮಲ್ಟಿಪ್ಲೆಕ್ಸ್‌ ನಲ್ಲಿ ಚಿತ್ರ ಪ್ರದರ್ಶಿಸಲು ಅಲ್ಲಿನ ವಾಣಿಜ್ಯ ಮಂಡಳಿಯ ಅನುಮತಿ ಬೇಕೆಂದು ತಕರಾರು ಎತ್ತಿದ್ದ ಕಾರಣ ಗರಂ ಆದ ನಟ ಸತೀಶ್ ನಮ್ಮ ರಾಜ್ಯದಲ್ಲಿ ಪರಭಾಷೆ ಚಿತ್ರಗಳು ಉತ್ತಮ ಪ್ರದರ್ಶನ ಕಾಣುತ್ತಿದೆ. ಆದರೆ ಪಕ್ಕದ ಹೈದರಾಬಾದ್ ನಲ್ಲಿ ಎರಡು ಶೋ ಹಾಕಲು ಅವಕಾಶ ಸಿಗುತ್ತಿಲ್ಲ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ದೂರು ಸಲ್ಲಿಸುತ್ತೇನೆ ಎಂದಿದ್ದಾರೆ.


ಬುಕ್ ಮೈ ಶೋದಲ್ಲಿ ಯಾರೋ ನಾಲ್ಕು ಜನ ಕೆಟ್ಟದಾಗಿ ಬರೆದ ಮಾತ್ರಕ್ಕೆ ಸಿನಿಮಾದ ಮೇಲೆ ಯಾವ ಪರಿಣಾಮ ಬೀರಲ್ಲ. ಕೆಟ್ಟದಾಗಿ ಬರೆಯುವವರಿಗೆ ಎಚ್ಚೆರಿಕೆಯನ್ನು ನೀಡಬೇಕಾಗುತ್ತದೆ ಎಂದು ಸತೀಶ್ ಗುಡುಗಿದ್ದಾರೆ.


ಮಾಧ್ಯಮಗಳಿಗೂ ಧನ್ಯವಾದ ತಿಳಿಸಿದ  ನಂತರ ಮನವಿ ಮಾಡಿಕೊಂಡಿರುವ ಸತೀಶ್ ದಯವಿಟ್ಟು ಕನ್ನಡ ಸಿನಿಮಾ ಉಳಿಸಿ. ನಮ್ಮ ನೆಲದಲ್ಲಿ ಬೇರೆಯವರು ಬಂದು ಹಣ ಮಾಡಿಕೊಂಡು ಹೋಗುತ್ತಿದ್ದಾರೆ. ಹೊರ ರಾಜ್ಯದಲ್ಲಿ ಒಂದೇ ಒಂದು ಥಿಯೇಟರ್ ಪಡೆದುಕೊಳ್ಳಬೇಕಾದರೆ 120 ಜನರ ಅನುಮತಿ ಬೇಕು? ಇದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments