Webdunia - Bharat's app for daily news and videos

Install App

ಅಯೋಗ್ಯ ಚಿತ್ರದಲ್ಲಿ ಮೋಡಿ ಮಾಡಿ ಮತ್ತೆ ಒಂದಾದ ಸತೀಶ್‌ ನೀನಾಸಂ, ರಚಿತಾ ರಾಮ್

Sampriya
ಬುಧವಾರ, 11 ಡಿಸೆಂಬರ್ 2024 (16:46 IST)
Photo Courtesy X
ಬೆಂಗಳೂರು: ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ  ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.

ಅಯೋಗ್ಯ 2 ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಮತ್ತೆ ಒಂದಾಗಿದ್ದಾರೆ. 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ.

ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಇಂದು ನಡೆದ ಅದ್ಧೂರಿ ಮುಹೂರ್ತ ಸಮಾರಂಭದಲ್ಲಿ ಅಯೋಗ್ಯ 2 ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ. ಡೈರೆಕ್ಟರ್ ಮಹೇಶ್ ಕುಮಾರ್ ಸಾರಥ್ಯದಲ್ಲಿಈ ಸಿನಿಮಾ ಮೂಡಿ ಬರುತ್ತಿದ್ದು‌, ಮುನೇಗೌಡ ಅವರು ತಮ್ಮ ಎಸ್ ವಿ ಸಿ ಪ್ರೊಡಕ್ಷನ್‌ನಲ್ಲಿ ಬಂಡವಾಳ ಹೂಡಿದ್ದಾರೆ.  

ಅಶ್ವಿನಿ ಪುನೀತ್ ರಾಜ್‌ಕುಮಾರ್  ಅಯೋಗ್ಯ 2‌ ಚಿತ್ರಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದರು. ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾತಂಡದ ಜೊತೆಗೆ ನೆನಪಿರಲಿ ಪ್ರೇಮ್, ನಟ ಶ್ರೇಯರ್ ಮಂಜು, ಪ್ರಮೋದ್ ಸೇರಿದಂತೆ ಅನೇಕ ಕಲಾವಿದರು ಹಾಜರಿದ್ದು ಸಿನಿಮಾತಂಡಕ್ಕೆ ಶುಭಹಾರೈಸಿದರು.

ನಿರ್ದೇಶಕ ಮಹೇಶ್ ಮಾತನಾಡಿ, ಅಯೋಗ್ಯ  2 ಕನ್ನಡದ ಜೊತೆಗೆ ತಮಿಳು, ತೆಲುಗಿನಲ್ಲೂ ಮಾಡುತ್ತಿದ್ದೇವೆ. ರಚಿತಾ ಮತ್ತು ಸತೀಶ್ ಅವರನ್ನು ತೆರೆಮೇಲೆ ನೋಡೋಕೆ ತುಂಬಾ ಖುಷಿ ಆಗುತ್ತೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ, ಫ್ಯಾನ್ ಇಂಡಿಯಾ ಸಿನಿಮಾ. ಮೊದಲ ಭಾಗ ಹಿಟ್ ಆದ್ಮೇಲೆ ಬೇರೆ ಭಾಷೆಗೆ ಡಬ್ ಮಾಡಿದ್ವಿ. ಆದರೀಗ ತಮಿಳು ಹಾಗೂ ತೆಲುಗಿನಲ್ಲಿ ಮಾಡುತ್ತಿದ್ದೇವೆ ಎಂದು ಹೇಳಿದರು.

ನೀನಾಸಂ ಸತೀಶ್ ಮಾತನಾಡಿ, ಅಯೋಗ್ಯ 2 ಸಿನಿಮಾಗೆ ನಿರ್ಮಾಪಕರ ದೊಡ್ಡ ಲಿಸ್ಟ್ ಇತ್ತು. ಅದರೆ ಕೊನೆಯದಾಗಿ ಮುನೇಗೌಡ ಅವರು ಫೈನಲ್ ಆಗಿದ್ದಾರೆ ಅವರು ಉತ್ತಮ ನಿರ್ಮಾಪಕರು. ಅಯೋಗ್ಯ 2 ಸಿನಿಮಾ ಕನ್ನಡ ಸಿನಿಮಾರಂಗಕ್ಕೆ ದೊಡ್ಡ ಸಿನಿಮಾವಾಗಲಿದೆ ಎಂದು ಹೇಳಿದರು.

ರಚಿತಾ ರಾಮ್ ಮಾತನಾಡಿ, ಕಳೆದ 6 ವರ್ಷದ ಹಿಂದೆ ಅಯೋಗ್ಯ ಸಿನಿಮಾ ಇದೇ ಜಾಗದಲ್ಲಿ ಮುಹೂರ್ತ ಆಗಿತ್ತು. ತುಂಬಾ ಖುಷಿ ಆಗುತ್ತಿದೆ. ಅಶ್ವಿನಿ ಮೇಡಮ್ ಅವರ ಆಶೀರ್ವಾದವಿದೆ. ಮೊದಲ ಭಾಗಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments