Webdunia - Bharat's app for daily news and videos

Install App

ಮಹಾಕುಂಭಮೇಳದಲ್ಲಿ ಶೂಟಿಂಗ್ ಮಾಡಿದ ಸೀತಾರಾಮ ಧಾರವಾಹಿ: ನೆಟ್ಟಿಗರು ಕಾಮೆಂಟ್ ನೋಡಿ

Krishnaveni K
ಮಂಗಳವಾರ, 25 ಫೆಬ್ರವರಿ 2025 (11:07 IST)
Photo Credit: Instagram
ಬೆಂಗಳೂರು: ಕಿರುತೆರೆ ಧಾರವಾಹಿಗಳು ಇತ್ತೀಚೆಗಿನ ದಿನಗಳಲ್ಲಿ ಯಾವುದೇ ಸಿನಿಮಾಗೂ ಕಮ್ಮಿಯಿಲ್ಲದಂತೆ ಸಾಹಸ ಮಾಡುತ್ತಿವೆ. ಇದೀಗ ಸೀತಾರಾಮ ಧಾರವಾಹಿ ತಂಡ ಮಹಾಕುಂಭಮೇಳದಲ್ಲಿ ಶೂಟಿಂಗ್ ಮಾಡಿ ಬಂದಿದ್ದು ಇದರ ಬಗ್ಗೆ ನೆಟ್ಟಿಗರು ಹೇಳಿದ್ದೇನು ಇಲ್ಲಿದೆ ವಿವರ.

ವೈಷ್ಣವಿ ಗೌಡ ಸೀತಾ ಆಗಿ ಮತ್ತು ಗಗನ್ ಚಿನ್ನಪ್ಪ ಶ್ರೀರಾಮ್ ದೇಸಾಯಿ ಪಾತ್ರದಲ್ಲಿ ನಟಿಸಿರುವ ಸೀತಾರಾಮ ಧಾರವಾಹಿಯಲ್ಲಿ ಈಗ ನಾಯಕಿ ಮಗಳು ಸಿಹಿ ಸಾವಿನ ನಂತರ ಆಕೆಯದ್ದೇ ತದ್ರೂಪು ಸುಬ್ಬಿ ಎಂಟ್ರಿಯಾಗಿದೆ.

ಈಗ ಸಿಹಿ ಸ್ಥಾನದಲ್ಲಿ ಸುಬ್ಬಿ ದೇಸಾಯಿ ಮನೆಗೆ ಎಂಟ್ರಿ ಕೊಟ್ಟಿದ್ದು ಸೀತಾ ಮೊದಲಿನಂತೆ ಲವ ಲವಿಕೆಯಿಂದಿದ್ದಾರೆ. ಕತೆ ಹೀಗೆ ಸಾಗಿರುವಾಗ ಈಗ ಧಾರವಾಹಿ ತಂಡ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಶೂಟಿಂಗ್ ನಡೆಸಿ ಬಂದಿದೆ.

ಯಾವುದೇ ಧಾರವಾಹಿ ಮಾಡದ ಸಾಹಸವನ್ನು ಸೀತಾರಾಮ ಧಾರವಾಹಿ ಮಾಡಿ ಬಂದಿದೆ. ಇದರ ಪ್ರೋಮೋಗಳು ಈಗಾಗಲೇ ಹರಿಯಬಿಡಲಾಗಿದ್ದು ಇದನ್ನು ನೋಡಿ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಟಿಆರ್ ಪಿಗಾಗಿ ನೀವು ಮಹಾ ಕುಂಭಮೇಳವನ್ನು ಬಿಡಲಿಲ್ಲ ಎಂದು ಕೆಲವರು ಕಾಲೆಳೆದಿದ್ದರೆ ಮತ್ತೆ ಕೆಲವರು ಈ ಎಪಿಸೋಡ್ ಗಳನ್ನು ನೋಡಲು ಕಾಯುತ್ತಿರುವುದಾಗಿ ಹೇಳಿದ್ದಾರೆ. ಮತ್ತೆ ಕೆಲವರು ನೆರಳಿನಂತೆ ಸುಬ್ಬಿ, ಸೀತಾ-ರಾಮರನ್ನು ಹಿಂಬಾಲಿಸುತ್ತಿರುವ ಸಿಹಿ ಆತ್ಮಕ್ಕೆ ಮುಕ್ತಿ ಕೊಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಇದೇ ವಾರ ಕುಂಭಮೇಳದ ಎಪಿಸೋಡ್ ಗಳು ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments