Webdunia - Bharat's app for daily news and videos

Install App

ಅಧ್ಯಕ್ಷ ಚಿತ್ರದ ವಿವಾದಿತ ದೃಶ್ಯಗಳಿಗೆ ಕತ್ತರಿ: ಸೆನ್ಸಾರ್ ಮಂಡಳಿ ಕೋಪ

Webdunia
ಸೋಮವಾರ, 18 ಆಗಸ್ಟ್ 2014 (10:57 IST)
ಅಧ್ಯಕ್ಷ  ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಕೊಟ್ಟ ಮೇಲೆ ಕೆಲವು ದೃಶ್ಯಗಳನ್ನು ಕತ್ತರಿಸಿದ್ದು ಸೆನ್ಸಾರ್ ಮಂಡಳಿಯ ಕೋಪಕ್ಕೆ ಗುರಿಯಾಗಿದೆ.  ನಿಯಮ ಉಲ್ಲಂಘಿಸಿದ ಚಿತ್ರತಂಡಕ್ಕೆ ಸೆನ್ಸಾರ್ ಮಂಡಳಿ ಎಚ್ಚರಿಕೆ ನೀಡಿದೆ. ಶ್ರೀಕೃಷ್ಣನ ಕುರಿತು ಅವಹೇಳನಕಾರಿ ದೃಶ್ಯಗಳಿವೆಯೆಂದು ಹಿಂದು ಜಾಗರಣ ವೇದಿಕೆ ಆಕ್ಷೇಪ ವ್ಯಕ್ತಪಡಿಸಿತ್ತು. ಚಿತ್ರದ ಹಾಡಿನಲ್ಲಿರುವ ಕೆಲವು ಅವಹೇಳನಕಾರಿ ದೃಶ್ಯಗಳನ್ನು ಕತ್ತರಿಸಬೇಕೆಂದು ಅದು ಸೆನ್ಸಾರ್ ಮಂಡಳಿಗೆ ಮನವಿ ಸಲ್ಲಿಸಿತ್ತು.

ಆದರೆ ಹಿಂದೂ ಜಾಗರಣ ವೇದಿಕೆ ಮನವಿಯಲ್ಲಿ ಯಾವುದೇ ಸತ್ಯಾಂಶವಿಲ್ಲ, ದುರುದ್ದೇಶಪೂರಿತವಾಗಿದೆ ಎಂದು ತೀರ್ಮಾನಿಸಿ ಕತ್ತರಿಸಲು ಅವಕಾಶ ನೀಡಲಿಲ್ಲ ಎಂದು ಸೆನ್ಸಾರ್ ಮಂಡಳಿ ಅಧಿಕಾರಿ ನಾಗೇಂದ್ರ ಸ್ವಾಮಿ ಹೇಳಿದ್ದಾರೆ.  ಆದರೆ  ಚಿತ್ರದ ನಿರ್ಮಾಪಕರು ಸೆನ್ಸಾರ್ ಅನುಮತಿ ಪಡೆದ ಮೇಲೆ ಆಕ್ಷೇಪಾರ್ಹ ದೃಶ್ಯಗಳನ್ನು ಕತ್ತರಿಸಿದ್ದು ಸೆನ್ಸಾರ್ ಮಂಡಳಿ ಕೋಪಕ್ಕೆ ಗುರಿಯಾಗಿದೆ.. ಕೋರ್ಟ್ ಆದೇಶ ನೀಡಿದ್ದರಿಂದ ತಾವು ವಿವಾದಿತ ದೃಶ್ಯಗಳನ್ನು ಕತ್ತರಿಸಿದ್ದಾಗಿ ನಿರ್ಮಾಪಕ ಗಂಗಾಧರ್ ಹೇಳಿದ್ದಾರೆ.

 ಆದರೆ ಆಕ್ಷೇಪಾರ್ಹ ದೃಶ್ಯ ಕತ್ತರಿಸುವಂತೆ ಕೋರ್ಟ್‌ನಿಂದ ತಮಗೆ ಯಾವುದೇ ಸೂಚನೆ ಬಂದಿಲ್ಲ ಎಂದು ನಾಗೇಂದ್ರ ಸ್ವಾಮಿ ಹೇಳಿದ್ದಾರೆ. ನಿಯಮ ಉಲ್ಲಂಘಿಸಿದ ಚಿತ್ರತಂಡಕ್ಕೆ ನೆನ್ಸಾರ್ ಮಂಡಳಿ  ಎಚ್ಚರಿಕೆ ನೀಡಿದ ಮೇಲೆ  ಯಾವುದೇ ದೃಶ್ಯಗಳಿಗೆ ಕತ್ತರಿಯಿಲ್ಲದೇ ಪ್ರದರ್ಶನ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments