Webdunia - Bharat's app for daily news and videos

Install App

ಸೆಟ್ಟೇರಿತು 'ತಪಸ್ಸಿ' ಸಿನಿಮಾ: ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ವಿ. ರವಿಚಂದ್ರನ್

Sampriya
ಮಂಗಳವಾರ, 19 ಮಾರ್ಚ್ 2024 (19:47 IST)
Photo Courtesy Facebook
ಬೆಂಗಳೂರು:  ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ತಪಸ್ಸಿ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಅಭಿನಯಿಸುತ್ತಿದ್ದಾರೆ. 
 
ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. 
 
ನನ್ನ ಭಾಗದ ಚಿತ್ರೀಕರಣವಷ್ಟೇ ಬಾಕಿದ್ದು, ಅದನ್ನು ಮುಂದಿನ 6-7 ತಿಂಗಳೊಳಗೆ ಮುಗಿಸುತ್ತೇನೆ. ಮ್ಯಾಥ್ಯೂ ನನಗೆ ತುಂಬಾ ಕ್ಲೋಸ್ ಫ್ರೆಂಡ್. ತುಂಬಾ ಶಿಸ್ತಿನಿಂದ ನಡೆದುಕೊಳ್ಳುವ ವ್ಯಕ್ತಿ. ರವಿ ಬೋಪಣ್ಣ ಸಿನಿಮಾದಿಂದ ನನಗೆ ಪರಿಚಯ. ಅದಕ್ಕೂ ಮುಂಚೆಯಿಂದಲೂ ಗಾಂಧಿನಗರದಲ್ಲಿ ಇದ್ದಾರೆ. ಅವರೇ ಈ ಸ್ಟೋರಿ ಮಾಡಿದ್ದಾರೆ. ನೀವೇ ಮಾಡಬೇಕು. ಒಂದು ಸಾಮಾಜಿಕ ಸಂದೇಶ ಸಾರಬೇಕು. ತೂಕವಾದ ಪಾತ್ರ. ಇಡೀ ಸಿನಿಮಾಗೆ ನ್ಯಾಯ ಒದಗಿಸಲು ನನ್ನ ಸೆಲೆಕ್ಟ್ ಮಾಡಿದ್ದಾರೆ ಎಂದರು.
 
 
ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಮಾತನಾಡಿ, ರವಿಚಂದ್ರನ್ ಸರ್ ಅವರಿಂದಲೇ ಈ ಪ್ರಾಜೆಕ್ಟ್ ಶುರುವಾಗಿದೆ. ಅವರಿಗೆ ಧನ್ಯವಾದ ಹೇಳುತ್ತೇನೆ. ಈ ಚಿತ್ರದಲ್ಲಿ ಸ್ಟ್ರಾಂಗ್ ಮೆಸೇಜ್ ಇದೆಎಂದರು.
 
ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಸಿನಿಮಾವಾಗಿರುವ ತಪಸ್ಸಿಯಲ್ಲಿ ಪ್ರಾಧ್ಯಾಪಕರಾಗಿ ಡಾಕ್ಟರ್ ವಿ. ರವಿಚಂದ್ರನ್ ನಟಿಸ್ತಿದ್ದು, ಅಮ್ಮಯ್ರ ಗೋಸ್ವಾಮಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ವಿನಯ ಪ್ರಸಾದ್, ಪ್ರಜ್ವಲ್, ಸಚಿನ್, ಅನುಷಾ ಕಿಣಿ, ಭಾಸ್ಕರ್ ಸೇರಿದ ದೊಡ್ಡ ತಾರಾಬಳಗವಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments