Webdunia - Bharat's app for daily news and videos

Install App

ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಸೆ.16ಕ್ಕೆ ಸಭೆ ಕರೆದ ಚಲನಚಿತ್ರ ವಾಣಿಜ್ಯ ಮಂಡಳಿ

Sampriya
ಶುಕ್ರವಾರ, 6 ಸೆಪ್ಟಂಬರ್ 2024 (16:03 IST)
Photo Courtesy X
ಬೆಂಗಳೂರು: ಕೇರಳ ಮಾದರಿಯಲ್ಲೇ ಕನ್ನಡ ಚಿತ್ರರಂಗದಲ್ಲೂ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನ ಮಾಡುವಂತೆ ಸಿಎಂಗೆ ಮನವಿ ಮಾಡಿದ ಬೆನ್ನಲ್ಲೇ ಇದೇ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಲಾವಿದೆಯರು ಹಾಗೂ ಚಿತ್ರರಂಗದ ಪ್ರಮುಖರ ಸಭೆ ನಡೆಯಲಿದೆ.

ಕನ್ನಡ ಚಿತ್ರರಂಗದ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನಕ್ಕೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆಗೆ ಒತ್ತಾಯಿಸಿ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ನಿಯೋಗ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮನವಿ ಮಾಡಿದ್ದರು. ಈ ಸಂಬಂದ ಇದೀಗ ವಾಣಿಜ್ಯ ಮಂಡಳಿ ಎಲ್ಲರನ್ನೂ ಒಗ್ಗೂಡಿಸಿ ಸಭೆ ನಡೆಸಲಿದೆ.

ಇನ್ನೂ ಚಿತ್ರರಂಗದಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸೆ.13ರೊಳಗೆ ಸಭೆ ನಡೆಸಿ ಚರ್ಚಿಸಬೇಕು. ಚಿತ್ರರಂಗದ ನಟಿಯರನ್ನು ಆಹ್ವಾನಿಸಿ ಅವರ ಸಮ್ಮುಖದಲ್ಲಿ ಚಿತ್ರರಂಗದ ಪ್ರಮುಖರೊಂದಿಗೆ ಸಭೆ ನಡೆಸಿ, ಸಮಿತಿ ರಚಿಸಲು ಒತ್ತಾಯಿಸುವಂತೆ ತೀರ್ಮಾನ ತೆಗೆದುಕೊಳ್ಳಿ ಎಂದು ಮಹಿಳಾ ಆಯೋಗ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದೆ.

ಇದೀಗ ಹಬ್ಬ ಇರುವುದರಿಂದ ಸಾಕಷ್ಟು ಕಲಾವಿದೆಯರು ಲಭ್ಯವಿಲ್ಲದ ಕಾರಣ ಸೆ.16ಕ್ಕೆ ವಾಣಿಜ್ಯ ಮಂಡಳಿ ಆವರಣದಲ್ಲಿ ಸಭೆ ಕರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಮುಂದಿನ ಸುದ್ದಿ