Webdunia - Bharat's app for daily news and videos

Install App

ಇಬ್ಬರು ಹೀರೋಗಳಾದರೆ ತೊಂದರೆಯೇನು ಎಂದ ಶಾಹಿದ್ ಕಪೂರ್

Webdunia
ಸೋಮವಾರ, 24 ಅಕ್ಟೋಬರ್ 2016 (11:50 IST)
ಮುಂಬೈ: ಬಾಲಿವುಡ್ ನ ಚಾಕಲೇಟ್ ಹೀರೋ ಶಾಹಿದ್ ಕಪೂರ್  ಇಬ್ಬರು ಹೀರೋಗಳಿರುವ ಚಿತ್ರದಲ್ಲಿ ಅಭಿನಯಿಸುವುದಕ್ಕೆ ನನಗೇನು ತೊಂದರೆಯಿಲ್ಲ ಎಂದಿದ್ದಾರೆ.

ಮುಂಬರುವ “ಪದ್ಮಾವತಿ” ಎಂಬ ಐತಿಹಾಸಿಕ ಚಿತ್ರದಲ್ಲಿ ಅವರು ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಜತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಆದರೆ ರಣವೀರ್ ಜತೆ ಶಾಹಿದ್ ಗೆ ಎಲ್ಲವೂ ಸರಿಯಿಲ್ಲ. ಇವರಿಬ್ಬರ ನಡುವೆ ಶೀತಲ ಸಮರ ನಡೆಯುತ್ತಿದೆ ಎಂದೆಲ್ಲಾ ವರದಿಯಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಶಾಹಿದ್ “ಇದರಲ್ಲಿ ಸಮಸ್ಯೆಯೇನಿದೆ. ನಮಗೆ ಮೂವರಿಗೂ ಇದೊಂದು ಉತ್ತಮ ಅವಕಾಶ. ನಮಗೆ ಮೂವರಿಗೂ ಪ್ರಮುಖ ಪಾತ್ರವಿದೆ.  ನನಗೆ ನನ್ನ ಪಾತ್ರ ಮತ್ತು ಸಿನಿಮಾ ಬಗ್ಗೆ ಖುಷಿಯಿದೆ. ಈ ಬಗ್ಗೆ ಸುಮ್ಮನೇ ಸುದ್ದಿ ಹರಡಲಾಗುತ್ತಿದೆ” ಎಂದು ಶಾಹಿದ್ ಹೇಳಿಕೊಂಡಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಣವೀರ್ ಸಿಂಗ್, ಶಾಹಿದ್ ಕಪೂರ್ ಮತ್ತು ದೀಪಿಕಾ ಪಡುಕೋಣೆ ನಟಿಸುತ್ತಿದ್ದು, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಕರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments