Select Your Language

Notifications

webdunia
webdunia
webdunia
webdunia

ಸಿನಿಮಾ ರಂಗಕ್ಕೆ ಎಂಟ್ರಿ ನೀಡಿದ ಮುಖ್ಯಮಂತ್ರಿ ಚಂದ್ರು ಪುತ್ರ ಶರತ್ ಚಂದ್ರು

ಸಿನಿಮಾ ರಂಗಕ್ಕೆ ಎಂಟ್ರಿ ನೀಡಿದ ಮುಖ್ಯಮಂತ್ರಿ ಚಂದ್ರು ಪುತ್ರ ಶರತ್ ಚಂದ್ರು

ಅತಿಥಾ

ಬೆಂಗಳೂರು , ಗುರುವಾರ, 1 ಮಾರ್ಚ್ 2018 (18:24 IST)
ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರ ಪುತ್ರ ಶರತ್ ಚಂದ್ರು ಇದೀಗ ಕನ್ನಡ ಸಿನಿಮಾದಲ್ಲಿ ನಾಯಕನಾಗಿ ಎಂಟ್ರಿ ಮಾಡುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾದಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಶರತ್ ಚಂದ್ರು, ಈಗ ಮೊದಲ ಬಾರಿಗೆ ಹೀರೋ ಆಗಿದ್ದಾರೆ.
ಶರತ್ ಈ ಹಿಂದೆ ನಟ ಕಿಚ್ಚ ಸುದೀಪ್ ಅವರ 'ರನ್ನ' ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದರು. ಈಗ "ದಿ ವಿಲನ್" ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.
 
ಶಾರ್ಟ್ ಫಿಲಂ ಮಾಡುತ್ತಿದ್ದ ವಿನಯ್ ಭಾರದ್ವಾಜ್ ಮೊದಲ ಬಾರಿಗೆ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ತಮ್ಮ ಮೊದಲ ನಿರ್ದೇಶನದ ಸಿನಿಮಾಗೆ ಹೀರೋ ಆಗಿ ಶರತ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಅದರ ಪೈಕಿ ಸಿಹಿ ಕಹಿ ಚಂದ್ರು ಮಗಳು ಹಿತಾ ಚಂದ್ರಶೇಖರ್ ಕೂಡ ಒಬ್ಬರಾಗಿದ್ದಾರೆ.
 
ಈ ಚಿತ್ರಕ್ಕೆ ಇಂಚರ ರಾವ್ ಹಿನ್ನೆಲೆಯ ಗಾಯನ ಮಾಡಿದ್ದಾರೆ. 12 ನೇ ಶತಮಾನದ ಅಕ್ಕ ಮಹಾದೇವಿಯ ರಚನೆಯ ಕನಸ ಕಂಡೆ ವಚನವನ್ನು ಸಮಕಾಲೀನ ಶೈಲಿಗೆ ಹೊಂದಿಸಿದ ವಿಡಿಯೋ ಬಿಡುಗಡೆ ಮಾಡಲಾಗಿದೆ. ಈ ಚಿತ್ರವು ಒಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದೆ. ಮಾರ್ಚ್ 20 ರಿಂದ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ಶುರುವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭುಜದ ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಮಾಧವನ್