Webdunia - Bharat's app for daily news and videos

Install App

ಬಂಗಾರಪ್ಪ ಮನೆ ಒಂದು ಮಾಡಲು ನಾನು ಅವರ ಮನೆ ಮಗ ಅಲ್ಲ: ಶಿವರಾಜ್ ಕುಮಾರ್

Krishnaveni K
ಮಂಗಳವಾರ, 12 ಮಾರ್ಚ್ 2024 (13:40 IST)
ಬೆಳಗಾವಿ: ಒಡೆದ ಮನೆಯಂತಾಗಿರುವ ಬಂಗಾರಪ್ಪ ಮನೆ ಒಂದು ಮಾಡಲು ಪ್ರಯತ್ನ ಮಾಡುತ್ತೀರಾ ಎಂಬ ಪ್ರಶ್ನೆಗೆ ನಟ, ಅಳಿಯ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಎಲ್ಲರಿಗೂ ಗೊತ್ತಿರುವ ಹಾಗೆ ಶಿವಣ್ಣ ಪತ್ನಿ ಗೀತಾ ಬಂಗಾರಪ್ಪನವರ ಮಗಳು. ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಬಂಗಾರಪ್ಪ ಪುತ್ರರಾದ ಸಚಿವ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ವೈಮನಸ್ಯವಿದೆ. ಹೀಗಾಗಿ ಬಂಗಾರಪ್ಪ ಮನೆ ಒಡೆದ ಮನೆಯಂತಾಗಿದೆ.

ಇದೀಗ ಬಂಗಾರಪ್ಪ ಮನೆ ಒಂದು ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಶಿವರಾಜ್ ಕುಮಾರ್ ‘ಬಂಗಾರಪ್ಪ ಮನೆ ಒಂದು ಮಾಡಲು ನಾನು ಅವರ ಮನೆ ಅಳಿಯ, ಮಗನಲ್ಲ’ ಎಂದಿದ್ದಾರೆ. ಆ ಮೂಲಕ ಬಂಗಾರಪ್ಪ ಮನೆ ವಿಚಾರದಲ್ಲಿ ತಲೆ ಹಾಕುವುದಿಲ್ಲ ಎಂದಿದ್ದಾರೆ.

ಆದರೆ ಪತ್ನಿ ಗೀತಾರನ್ನು ಸಂಸದೆಯಾಗಿ ನೋಡುವ ಆಸೆಯಿದೆ. ಅವರನ್ನು ಗೆಲ್ಲಿಸಲು ಏನು ಮಾಡಬೇಕೋ ಎಲ್ಲಾ ಮಾಡುತ್ತೇವೆ. ಗೀತಾ ಪರವಾಗಿ ಪ್ರಚಾರ ಮಾಡಲೂ ಸಿದ್ಧ ಎಂದಿದ್ದಾರೆ. ಕರಟಕ ದಮನಕ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಶಿವರಾಜ್ ಕುಮಾರ್ ಇಂದು ಬೆಳಗಾವಿಯಲ್ಲಿ ಅಭಿಮಾನಿಗಳನ್ನು ಭೇಟಿಯಾಗಿದ್ದರು. ಈ ವೇಳೆ ಮಾಧ‍್ಯಮಗಳಿಗೆ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments