Webdunia - Bharat's app for daily news and videos

Install App

ನನ್ನ ವಿರುದ್ಧ ಕಂಪ್ಲೇಂಟ್ ಆಗಿದೆ ಎಂದು ಗೊತ್ತೇ ಇಲ್ಲ: ಶಿವರಾಜ್ ಕುಮಾರ್

Krishnaveni K
ಸೋಮವಾರ, 25 ಮಾರ್ಚ್ 2024 (10:36 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಪತ್ನಿ ಪರ ಶಿವಣ್ಣ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ ಬಿಜೆಪಿ ಚುನಾವಣಾ ಆಯೋಗಕ್ಕೆ ಶಿವರಾಜ್ ಕುಮಾರ್ ವಿರುದ್ಧ ದೂರು ನೀಡಿದೆ. ಪತ್ನಿ ಗೀತಾ ಪರ ಚುನಾವಣಾ ಪ್ರಚಾರ ನಡೆಸುತ್ತಿರುವುದಲ್ಲದೆ, ಕಾಂಗ್ರೆಸ್ ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವ ಕಾರಣಕ್ಕೆ ಶಿವಣ್ಣ ಸಿನಿಮಾಗಳು, ಜಾಹೀರಾತುಗಳನ್ನು ಚುನಾವಣೆ ಮುಗಿಯುವವರೆಗೆ ಬ್ಯಾನ್ ಮಾಡಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಶಿವರಾಜ್ ಕುಮಾರ್ ನನ್ನ ವಿರುದ್ಧ ದೂರು ದಾಖಲಾಗಿದೆ ಎಂದು ತಾಯಾಣೆಗೂ ನನಗೆ ಗೊತ್ತಿರಲಿಲ್ಲ ಎಂದಿದ್ದಾರೆ.  ನನಗೆ ತಾಯಾಣೆ ಈ ವಿಚಾರ ಗೊತ್ತಿಲ್ಲ. ಇದನ್ನು ಲೀಗಲ್ ಟೀಂ ನೋಡಿಕೊಳ್ಳುತ್ತದೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

ಇನ್ನು, ಇತ್ತೀಚೆಗೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಪ್ರಶ್ನಿಸಿದಾಗ ‘ಯಾರು ಯಾರನ್ನು ಬೇಕಾದ್ರೂ ಭೇಟಿಯಾಗಬಹುದು. ಅದರಲ್ಲಿ ತಪ್ಪೇನಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments