Webdunia - Bharat's app for daily news and videos

Install App

ಯುವರಾಜ್ ಕುಮಾರ್ ವಿಚ್ಛೇದನದ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದ ಶಿವರಾಜ್ ಕುಮಾರ್

Krishnaveni K
ಸೋಮವಾರ, 10 ಜೂನ್ 2024 (16:22 IST)
ಬೆಂಗಳೂರು: ದೊಡ್ಮನೆ ಕುಡಿ ಯುವರಾಜ್ ಕುಮಾರ್ ವಿಚ್ಛೇದನ ವದಂತಿ ಈಗ ಭಾರೀ ಸದ್ದು ಮಾಡುತ್ತಿದೆ. ಯುವ ತಮ್ಮ ಪತ್ನಿ ಶ್ರೀದೇವಿಗೆ ವಿಚ್ಛೇದನ ನೋಟಿಸ್ ನೀಡಿದ್ದಾರೆ ಎಂದು ಸುದ್ದಿಯಾಗಿದೆ. ಈ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಯುವರಾಜ್ ಕುಮಾರ್ ಮತ್ತು ಶ್ರೀದೇವಿ ಪ್ರೀತಿಸಿ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಈಗ ದಂಪತಿ ನಡುವೆ ಮನಸ್ತಾಪವೇರ್ಪಟ್ಟಿದ್ದು ಕಳೆದ ಆರು ತಿಂಗಳಿನಿಂದ ಬೇರೆ ಬೇರೆಯಾಗಿದ್ದಾರೆ ಎನ್ನಲಾಗಿದೆ. ಇದೀಗ ಯುವ ವಿಚ್ಛೇದನ ನೋಟಿಸ್ ನೀಡಿದ್ದು, ಇದರಲ್ಲಿ ತಮ್ಮ ಪತ್ನಿ ಮಾನಸಿಕ ಕ್ರೌರ್ಯ ನೀಡಿದ್ದಾರೆ ಎಂದು ಆಪಾದಿಸಿದ್ದಾರೆ.

ಶ್ರೀದೇವಿ ಸದ್ಯಕ್ಕೆ ವಿದೇಶಕ್ಕೆ ತೆರಳಿದ್ದಾರೆ. ಇನ್ನೂ ಅವರು ಯುವ ನೋಟಿಸ್ ಗೆ ಉತ್ತರ ನೀಡಿಲ್ಲ. ಡಾ ರಾಜ್ ಕುಮಾರ್ ಕುಟುಂಬದಲ್ಲಿ ಈ ರೀತಿ ವಿಚ್ಛೇದನವರೆಗೆ ತಲುಪುತ್ತಿರುವುದು ಇದೇ ಮೊದಲು. ಈ ಬಗ್ಗೆ ಶಿವರಾಜ್ ಕುಮಾರ್ ರನ್ನು ಮಾಧ್ಯಮಗಳು ಪ್ರಶ್ನಿಸಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ನನಗೆ ಈ ಬಗ್ಗೆ ಮಾಹಿತಿಯಿಲ್ಲ. ಮಾಹಿತಿ ಇಲ್ಲದೇ ಮಾತನಾಡುವುದು ಸರಿಯಲ್ಲ. ಮೊಬೈಲ್ ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ನೋವಾಗುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments