Select Your Language

Notifications

webdunia
webdunia
webdunia
webdunia

ಪತ್ನಿ ಗೀತಾ ಸೋತ ಬೆನ್ನಲ್ಲೇ ನಟ ಶಿವರಾಜ್ ಕುಮಾರ್ ಸೋಷಿಯಲ್ ಮೀಡಿಯಾ ಪೋಸ್ಟ್

Shiva Rajkumar-Geetha

Krishnaveni K

ಬೆಂಗಳೂರು , ಬುಧವಾರ, 5 ಜೂನ್ 2024 (10:28 IST)
ಬೆಂಗಳೂರು: ಈ ಬಾರಿ ಲೋಕಸಭಾ  ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದು ಸೋತಿರುವ ಪತ್ನಿ ಗೀತಾ ಪರವಾಗಿ ಪತಿ, ನಟ ಶಿವರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಸಂದೇಶ ಬರೆದಿದ್ದಾರೆ.

ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಮಗಳೂ ಆಗಿರುವ ಗೀತಾ ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ಸೋತ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಗೀತಾ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಅವರ ಪರವಾಗಿ ಈ ಬಾರಿ ಸಿನಿಮಾ ತಾರೆಯರು, ಸ್ವತಃ ಶಿವಣ್ಣನೇ ರೋಡ್ ಗಿಳಿದು ಪ್ರಚಾರ ನಡೆಸಿದರೂ ಪ್ರಯೋಜನವಾಗಿಲ್ಲ.

ಇದೀಗ ಪತ್ನಿ ಸೋತ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆದಿರುವ ಶಿವಣ್ಣ, ‘ಫಲಿತಾಂಶ ನಮ್ಮ ಕಡೆಯಾಗದಿದ್ದರೂ ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ವಿಶ್ವಾಸವಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ಧನ್ಯವಾದಗಳು’ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಶಸ್ತಿ ಪುರಸ್ಕೃತ ʼಶಿವಮ್ಮʼ ಸಿನಿಮಾ ತೆರೆಗೆ ತರಲು ದಿನ ಫಿಕ್ಸ್‌ ಮಾಡಿದ ರಿಷಭ್‌ ಶೆಟ್ಟಿ