Webdunia - Bharat's app for daily news and videos

Install App

ಪತ್ನಿ ಗೀತಾ ಸೋತ ಬೆನ್ನಲ್ಲೇ ನಟ ಶಿವರಾಜ್ ಕುಮಾರ್ ಸೋಷಿಯಲ್ ಮೀಡಿಯಾ ಪೋಸ್ಟ್

Krishnaveni K
ಬುಧವಾರ, 5 ಜೂನ್ 2024 (10:28 IST)
ಬೆಂಗಳೂರು: ಈ ಬಾರಿ ಲೋಕಸಭಾ  ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದು ಸೋತಿರುವ ಪತ್ನಿ ಗೀತಾ ಪರವಾಗಿ ಪತಿ, ನಟ ಶಿವರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಸಂದೇಶ ಬರೆದಿದ್ದಾರೆ.

ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಮಗಳೂ ಆಗಿರುವ ಗೀತಾ ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ಸೋತ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಗೀತಾ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಅವರ ಪರವಾಗಿ ಈ ಬಾರಿ ಸಿನಿಮಾ ತಾರೆಯರು, ಸ್ವತಃ ಶಿವಣ್ಣನೇ ರೋಡ್ ಗಿಳಿದು ಪ್ರಚಾರ ನಡೆಸಿದರೂ ಪ್ರಯೋಜನವಾಗಿಲ್ಲ.

ಇದೀಗ ಪತ್ನಿ ಸೋತ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆದಿರುವ ಶಿವಣ್ಣ, ‘ಫಲಿತಾಂಶ ನಮ್ಮ ಕಡೆಯಾಗದಿದ್ದರೂ ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ವಿಶ್ವಾಸವಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ಧನ್ಯವಾದಗಳು’ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments